July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ : ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸ್ಥಾಪಕ ದಿನವನ್ನು ಖಿಲರ್ ಜುಮ್ಮಾ ಮಸೀದಿ ಇದರ ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಯವರು ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಖಿಲರ್ ಜುಮ್ಮಾ ಮಸೀದಿ ಇದರ ಮುಖ್ಯ ಖತೀಬರಾದ ಹನೀಫ್ ಪೈಝೀ ಯವರು ದುವಾ ನೆರವೇರಿಸಿ ಸಮಸ್ತ ನಡೆದು ಬಂದ ದಾರಿಯನ್ನು ವಿವರಿಸಿದರು. ಅದೇ ರೀತಿ ಈ ಬಾರಿಯ ಸಮಸ್ತದ ನೂರನೇ ಶತಮಾನೋತ್ಸವ ಕಾಸರಗೋಡಿನ ಉದ್ಯಮಿಯಾದ ಇಬ್ರಾಹಿಂ ಹಾಜಿ ಕುಣಿಯವರ ವಿಶಾಲವಾದ ಮೈದಾನದಲ್ಲಿ ನಡೆಯಲಿದೆ ಎಂದರು.



ಖಿಲರ್ ಜುಮ್ಮಾ ಮಸೀದಿ ಇದರ ಪ್ರಧಾನ ಕಾರ್ಯದರ್ಶಿ ಗಳಾದ ರಝಾಕ್ ಬಿ.ಎಚ್, ಕಾರ್ಯದರ್ಶಿಗಳಾದ ಮಹಮ್ಮದ್ ಕುದ್ರಡ್ಕ, ಸಮಿತಿ ಸದಸ್ಯರುಗಳಾದ ಅಬ್ದುಲ್ ರಹಮಾನ್, ಬಶೀರ್, ಶರೀಫ್ ಹಾಗೂ ಜಮಾತ್ ಬಾಂಧವರು ಉಪಸ್ಥಿತರಿದ್ದರು.

ಅಬ್ದುಲ್ ರಹಮಾನ್ ಮದನಿ ಸ್ವಾಗತಿಸಿ, ಅಶ್ರಫ್ ಮುಸ್ಲಿಯಾರ್ ವಂದಿಸಿದರು.ಮುಖ್ಯೋಪಾಧ್ಯಾಯರಾದ ಸಿದ್ಧಿಕ್ ಅಝ್ಹರಿ ಕಾರ್ಯಕ್ರಮ ನಿರೂಪಿಸಿದರು.

Related posts

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ಬೆಳಾಲು ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ : ಚಿಕಿತ್ಸೆ ಫಲಕಾರಿಯಾಗದೆ ದಿಯಾನ್ ಸಾವು

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!