25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ : ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸ್ಥಾಪಕ ದಿನವನ್ನು ಖಿಲರ್ ಜುಮ್ಮಾ ಮಸೀದಿ ಇದರ ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಯವರು ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಖಿಲರ್ ಜುಮ್ಮಾ ಮಸೀದಿ ಇದರ ಮುಖ್ಯ ಖತೀಬರಾದ ಹನೀಫ್ ಪೈಝೀ ಯವರು ದುವಾ ನೆರವೇರಿಸಿ ಸಮಸ್ತ ನಡೆದು ಬಂದ ದಾರಿಯನ್ನು ವಿವರಿಸಿದರು. ಅದೇ ರೀತಿ ಈ ಬಾರಿಯ ಸಮಸ್ತದ ನೂರನೇ ಶತಮಾನೋತ್ಸವ ಕಾಸರಗೋಡಿನ ಉದ್ಯಮಿಯಾದ ಇಬ್ರಾಹಿಂ ಹಾಜಿ ಕುಣಿಯವರ ವಿಶಾಲವಾದ ಮೈದಾನದಲ್ಲಿ ನಡೆಯಲಿದೆ ಎಂದರು.



ಖಿಲರ್ ಜುಮ್ಮಾ ಮಸೀದಿ ಇದರ ಪ್ರಧಾನ ಕಾರ್ಯದರ್ಶಿ ಗಳಾದ ರಝಾಕ್ ಬಿ.ಎಚ್, ಕಾರ್ಯದರ್ಶಿಗಳಾದ ಮಹಮ್ಮದ್ ಕುದ್ರಡ್ಕ, ಸಮಿತಿ ಸದಸ್ಯರುಗಳಾದ ಅಬ್ದುಲ್ ರಹಮಾನ್, ಬಶೀರ್, ಶರೀಫ್ ಹಾಗೂ ಜಮಾತ್ ಬಾಂಧವರು ಉಪಸ್ಥಿತರಿದ್ದರು.

ಅಬ್ದುಲ್ ರಹಮಾನ್ ಮದನಿ ಸ್ವಾಗತಿಸಿ, ಅಶ್ರಫ್ ಮುಸ್ಲಿಯಾರ್ ವಂದಿಸಿದರು.ಮುಖ್ಯೋಪಾಧ್ಯಾಯರಾದ ಸಿದ್ಧಿಕ್ ಅಝ್ಹರಿ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಬಳಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ, ವಿವಿಧ ಸಂಘ ಸಂಸ್ಥೆಗಳು ಭಾಗಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಡೆಂಗ್ಯೂ ಜಾಗೃತಿ- ಡಾ. ಕಲಾಮಧು ದಂಪತಿಗಳಿಗೆ ಸನ್ಮಾನ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣoದೂರು ಪಣಕಜೆ ಇದರ ಆಶ್ರಯದಲ್ಲಿ ಪುರುಷರ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬ್ಬಡಿ ಪಂದ್ಯಾಟ

Suddi Udaya
error: Content is protected !!