25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

ಬೆಳ್ತಂಗಡಿ: ತುಳುನಾಡಿನ ಸಾಂಸ್ಕೃತಿಕ ಅಧ್ಯಯನ ಮತ್ತು ಭಾಷಾ ಚಟುವಟಿಕೆಗಳಲ್ಲಿ ನಿರಂತರವಾಗಿ ಕೊಡುಗೆ ನೀಡುತ್ತಿರುವ ಡಾ. ದಿವಾಕರ ಕೆ. (ದಿವ ಕೊಕ್ಕಡ) ಅವರನ್ನು ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಘಟಕದ ಸಂಚಾಲಕರಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ.

ಈ ನೇಮಕಾತಿ ತುಳುನಾಡಿನ ಪರಂಪರೆ, ಸಂಸ್ಕೃತಿ ಮತ್ತು ಭಾಷೆಯ ಸಂರಕ್ಷಣೆಗೆ ನೂರಾರು ವರ್ಷಗಳಿಂದ ಶ್ರಮಿಸುತ್ತಿರುವ ಮಹಾಸಭೆಯ ಶತಮಾನೋತ್ಸವ ಪುನಶ್ಚೇತನ ಅಭಿಯಾನಕ್ಕೆ ಶಕ್ತಿಯುತ ಸಹಕಾರ ನೀಡಲಿದೆ ಎಂದು ಸಂಘಟಕರ ಅಭಿಪ್ರಾಯಪಟ್ಟಿದ್ದಾರೆ.

ಡಾ. ದಿವ ಕೊಕ್ಕಡ ಅವರು ಪ್ರಸ್ತುತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಕನ್ನಡ ಸಹಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಡಾ. ಹಾಮಾನಾ ಸಂಶೋಧನ ಕೇಂದ್ರದ ಸಂಯೋಜನಾಧಿಕಾರಿಗಳೂ ಆಗಿದ್ದಾರೆ. ತುಳುನಾಡಿನ ವಾರ್ಷಿಕ ಆಚರಣೆಗಳ ಕುರಿತು ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಹೆಚ್.ಡಿ. ಪದವಿ ಲಭಿಸಿದೆ.

Related posts

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ ತಂಡ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಶಿಶಿಲ ದೇವಾಲಯದ ಸಮಿತಿ ರಚನೆ ಕುರಿತು ಬಿ.ಜಯರಾಮ ನೆಲ್ಲಿತ್ತಾಯ ರಿಂದ ಪ್ರಧಾನಮಂತ್ರಿ ಸಾರ್ವಜನಿಕ ಹಿತಾಸಕ್ತಿ ವಿಭಾಗಕ್ಕೆ ದೂರು ಸಲ್ಲಿಕೆ

Suddi Udaya
error: Content is protected !!