30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೋಷಕರ ಸಭೆಯಲ್ಲಿ ವಿವಿಧ ದಾನಿಗಳು ನೀಡಿದ ಕೊಡುಗೆಗಳನ್ನು ಶಾಲೆಗೆ ಹಸ್ತಾಂತರ ಮಾಡಲಾಯಿತು.

ಶಾಲೆಯ ಐದನೇ ತರಗತಿಯ ನಿರ್ಗಮಿತ ವಿದ್ಯಾರ್ಥಿಗಳು ಊಟದ ತಟ್ಟೆಗಳನ್ನು ಇಡುವ ಕಬ್ಬಿಣದ ಸ್ಟ್ಯಾಂಡ್, ಶಾಲಾ ಹಿರಿಯ ವಿದ್ಯಾರ್ಥಿ ಲೋಕೇಶ್ ಓನಾಜೆಯವರು ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಹಾಗೂ ಬೆಳ್ತಂಗಡಿಯ ಮುಳಿಯ ಜುವ್ಯೆಲರ್ಸ್ ವತಿಯಿಂದ ಕೊಡೆಗಳನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ನಿರ್ಗಮಿತ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಾಧವ ಗೌಡರು ಎಲ್ಲಾ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ವೇದಿಕೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ.ಉಪಾಧ್ಯಕ್ಷರಾದ ಶ್ರೀಮತಿ ಲೇಖಾವತಿ, ನೂತನ ಎಸ್.ಡಿ‌.ಎಂ.ಸಿ.ಅಧ್ಯಕ್ಷರಾದ ಹರೀಶ್ ಕೆರಕೋಡಿ, ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಶ್ರೀಮತಿ ತೀರ್ಥಲತಾ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಅತಿಥಿ ಶಿಕ್ಷಕರಾದ ದಿನೇಶ್ ಕೆ. ಸ್ವಾಗತಿಸಿದರು. ಗೌರವ ಶಿಕ್ಷಕರಾದ ಕರಿಯಣ್ಣ ಗೌಡ ವಂದಿಸಿದರು.

Related posts

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

Suddi Udaya

ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದ ಶರಣ್ ಪಂಪುವೆಲ್ ರವರ ಮೇಲೆ ಕೇಸು ಖಂಡನೀಯ : ನವೀನ್ ನೆರಿಯ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಶಿವರಾತ್ರಿ ಆಚರಣೆ

Suddi Udaya
error: Content is protected !!