23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಪ್ರೌಢ ಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ

ಬೆಳಾಲು : ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಗೌರವ ರಾಜ್ಯಪಾಲ, ಶಾಲಾ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಕಾರ್ಯಕ್ರಮ ಉದ್ಘಾಟಿಸಿ ಪ್ರಮಾಣ ವಚನ ಬೋಧಿಸಿದರು. ಬಳಿಕ ಅವರು ಮಾತನಾಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ತಿಳಿದುಕೊಳ್ಳಲು ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸರ್ಕಾರ ಸಹಕಾರಿಯಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿ ನಾಯಕ ಮೋಹನ್ ಕೃಷ್ಣ ವಾರ್ಷಿಕ ಯೋಜನೆ ಮಂಡಿಸಿದರು. ಶಿಕ್ಷಕ ಕಿರಣ್ ಕಾರ್ಯಕ್ರಮ ಸಂಘಟಿಸಿದರು. ಇತರ ಶಿಕ್ಷಕರು ಉಪಸ್ಥಿತರಿದ್ದರು. ಉಪನಾಯಕಿ ನೇತ್ರಾವತಿ ಸ್ವಾಗತಿಸಿ, ವಿರೋಧ ಪಕ್ಷದ ನಾಯಕಿ ರಕ್ಷಾ ಎನ್. ವಂದಿಸಿದರು‌. ಕಾರ್ಯದರ್ಶಿ ಮನೀಷ್ ಕಾರ್ಯಕ್ರಮ ನಿರೂಪಿಸಿದರು.

Related posts

ಕಳಿಯ ಗ್ರಾಮದ ಕೊರಂಜ ನಿವಾಸಿ ಜಯಪ್ರಕಾಶ್ ನಿಧನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್‌ ಮೋಟಾರು ರಿವೈಂಡಿಂಗ್‌ ಮತ್ತು ಪಂಪ್‌ ಸೆಟ್‌ ರಿಪೇರಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ವಾಣಿ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವೀಕ್ಷಾ ಜೆ.ಪಿಗೆ ರಾಜ್ಯಮಟ್ಟದಲ್ಲಿ 8ನೇ ರ‍್ಯಾಂಕ್

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

Suddi Udaya

ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿ ಉದ್ಘಾಟನೆ

Suddi Udaya
error: Content is protected !!