September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ವಿದ್ಯಾರ್ಥಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ ಇಂದು (ಜೂನ್ 25) ನಡೆಯಿತು.

ಕಾರ್ಯಕ್ರಮವನ್ನು ಎಸ್ ಡಿ ಎಂ ಪಿಯು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ದಿವ್ಯ ಕುಮಾರಿ ಕೆ ಉದ್ಘಾಟಿಸಿ, ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿ ನಾಯಕತ್ವದ ಮಹತ್ವ ಹಾಗೂ ಜವಾಬ್ದಾರಿಗಳ ಬಗ್ಗೆ ನುಡಿಗಳನ್ನಾಡಿದರು ಮತ್ತು ನೂತನ ಮಂತ್ರಿಗಳಿಗೆ ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಲತಾ ಎಂ.ಆರ್. ಅವರು ಮಂತ್ರಿಗಳಿಗೆ ಬ್ಯಾಡ್ಜ್ ಧರಿಸಿ ಗೌರವಿಸಿದರು.

ಶಾಲಾ ನಾಯಕಿ ಪೂರ್ವಿ ಮತ್ತು ಉಪನಾಯಕ ಶ್ರೀ ವಿನೀತ್ ತಮ್ಮ ಧನ್ಯವಾದಗಳನ್ನು ವ್ಯಕ್ತಪಡಿಸಿ, ನಡವಳಿಕೆಯ ಮೂಲಕ ನೇತೃತ್ವದ ನೈಜ ಅರ್ಥವನ್ನು ತೋರಿಸುವ ಭರವಸೆ ನೀಡಿದರು.

ಅನಘ ಸ್ವಾಗತಿಸಿದರು, ರಕ್ಷಣ್ ಅತಿಥಿ ಪರಿಚಯ ನೀಡಿದರು, ಸಂಜನಾ ವಂದನಾರ್ಪಣೆ ಸಲ್ಲಿಸಿದರು ಹಾಗೂ ನಿಧಿಶಾ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕರಿಸಿದರು.

Related posts

ಕನ್ಯಾಡಿ: ಪಾದೆ ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

Suddi Udaya

ಕಳೆದ ರಾತ್ರಿ ಸುರಿದ ಗುಡುಗು ಸಹಿತ ಜೋರಾದ ಗಾಳಿ ಮಳೆ: ಮುಂಡಾಜೆ- ಕಲ್ಮಂಜದಲ್ಲಿ 2 ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

Suddi Udaya
error: Content is protected !!