25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

ಪುಂಜಾಲಕಟ್ಟೆ: ಸ್ಪಂದನ ಆಟೋ ಚಾಲಕ ಮಾಲಕ ಸಂಘದಿಂದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರನ್ನು ಭೇಟಿ ಮಾಡಿ ರಸ್ತೆ ದುರಸ್ತಿ ಹಾಗೂ ಸಂಘದ ಇತರ ಬೇಡಿಕೆಗೆ ಸ್ಪಂದಿಸಬೇಕೆಂದು ಮನವಿ ಮಾಡಿದರು.

ಆಟೋ ಚಾಲಕ ಮಾಲಕ ಸಂಘದ ಬೇಡಿಕೆಗೆ ಸ್ಪಂದಿಸಿದ ಶಾಸಕರು ಪುಂಜಾಲಕಟ್ಟೆ ಪುರಿಯ‌ ರಸ್ತೆಗೆ ತಾತ್ಕಾಲಿಕ ಪರಿಹಾರ ಹಾಗೂ ಜನವರಿಯಲ್ಲಿ ಮರು ಡಾಂಬರೀಕರಣ ಮಾಡಿಸುತ್ತೇನೆಂದು ಭರವಸೆ ನೀಡಿದರು ಹಾಗೂ ಪೆರ್ಡೇ ಕ್ರಾಸ್ ನಿಂದ ಉರ್ಲಾವರೆಗಿನ ಕಾಂಕ್ರೀಟ್ ರಸ್ತೆಯ ಕೆಲಸ ಒಂದು ವಾರದಲ್ಲಿ ಆರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಕೆಪಿಎಸ್ ಪುಂಜಾಲಕಟ್ಟೆ ಅಧ್ಯಕ್ಷ ದಿವಾಕರ್ ಶೆಟ್ಟಿ ಕಂಗಿತ್ತಿಲು, ಸ್ಪಂದನ ಆಟೋ ಚಾಲಕರ ಮಾಲಕರ ಸಂಘದ ಗೌರವ ಅಧ್ಯಕ್ಷರಾದ ಗ್ರೇಗೊರಿ ಮಿರಂದ, ಅಧ್ಯಕ್ಷರಾದ ರಘುವೀರ್ ಬಾಳಿಗ, ಕಾರ್ಯದರ್ಶಿ ಯೋಗೀಶ್ ಧರ್ಬೇ, ಜೊತೆ ಕಾರ್ಯದರ್ಶಿ ಕಿರಣ್ ಶೆಟ್ಟಿ, ಕೋಶಾಧಿಕಾರಿ ಜಯರಾಮ್ ಗರ್ಡಾಡಿ, ಮಾಲಾಡಿ ಪಂಚಾಯತ್ ಸದಸ್ಯರಾದ ಬೆನೆಡಿಕ್ಟ್ ಮಿರಂದ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಬಿದ್ದ ದ್ವಿಚಕ್ರ ವಾಹನ

Suddi Udaya

ಜು.31: ವಿದ್ಯುತ್ ನಿಲುಗಡೆ

Suddi Udaya

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya

ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ ಬೂತ್ ಸಮಿತಿಗಳ ವತಿಯಿಂದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡರಿಗೆ ಸನ್ಮಾನ

Suddi Udaya
error: Content is protected !!