September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

ಪುಂಜಾಲಕಟ್ಟೆ: ಸ್ಪಂದನ ಆಟೋ ಚಾಲಕ ಮಾಲಕ ಸಂಘದಿಂದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರನ್ನು ಭೇಟಿ ಮಾಡಿ ರಸ್ತೆ ದುರಸ್ತಿ ಹಾಗೂ ಸಂಘದ ಇತರ ಬೇಡಿಕೆಗೆ ಸ್ಪಂದಿಸಬೇಕೆಂದು ಮನವಿ ಮಾಡಿದರು.

ಆಟೋ ಚಾಲಕ ಮಾಲಕ ಸಂಘದ ಬೇಡಿಕೆಗೆ ಸ್ಪಂದಿಸಿದ ಶಾಸಕರು ಪುಂಜಾಲಕಟ್ಟೆ ಪುರಿಯ‌ ರಸ್ತೆಗೆ ತಾತ್ಕಾಲಿಕ ಪರಿಹಾರ ಹಾಗೂ ಜನವರಿಯಲ್ಲಿ ಮರು ಡಾಂಬರೀಕರಣ ಮಾಡಿಸುತ್ತೇನೆಂದು ಭರವಸೆ ನೀಡಿದರು ಹಾಗೂ ಪೆರ್ಡೇ ಕ್ರಾಸ್ ನಿಂದ ಉರ್ಲಾವರೆಗಿನ ಕಾಂಕ್ರೀಟ್ ರಸ್ತೆಯ ಕೆಲಸ ಒಂದು ವಾರದಲ್ಲಿ ಆರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಕೆಪಿಎಸ್ ಪುಂಜಾಲಕಟ್ಟೆ ಅಧ್ಯಕ್ಷ ದಿವಾಕರ್ ಶೆಟ್ಟಿ ಕಂಗಿತ್ತಿಲು, ಸ್ಪಂದನ ಆಟೋ ಚಾಲಕರ ಮಾಲಕರ ಸಂಘದ ಗೌರವ ಅಧ್ಯಕ್ಷರಾದ ಗ್ರೇಗೊರಿ ಮಿರಂದ, ಅಧ್ಯಕ್ಷರಾದ ರಘುವೀರ್ ಬಾಳಿಗ, ಕಾರ್ಯದರ್ಶಿ ಯೋಗೀಶ್ ಧರ್ಬೇ, ಜೊತೆ ಕಾರ್ಯದರ್ಶಿ ಕಿರಣ್ ಶೆಟ್ಟಿ, ಕೋಶಾಧಿಕಾರಿ ಜಯರಾಮ್ ಗರ್ಡಾಡಿ, ಮಾಲಾಡಿ ಪಂಚಾಯತ್ ಸದಸ್ಯರಾದ ಬೆನೆಡಿಕ್ಟ್ ಮಿರಂದ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ನಾಳೆ(ಜೂ.21) ನೀಟ್ ಮರು ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು

Suddi Udaya

ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲೆಯ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸಂಸದ ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ

Suddi Udaya

ಲಯನ್ಸ್ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭ ಧನ್ಯೋಸ್ಮಿ

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ: ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

Suddi Udaya
error: Content is protected !!