23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

ಪುಂಜಾಲಕಟ್ಟೆ: ಸ್ಪಂದನ ಆಟೋ ಚಾಲಕ ಮಾಲಕ ಸಂಘದಿಂದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರನ್ನು ಭೇಟಿ ಮಾಡಿ ರಸ್ತೆ ದುರಸ್ತಿ ಹಾಗೂ ಸಂಘದ ಇತರ ಬೇಡಿಕೆಗೆ ಸ್ಪಂದಿಸಬೇಕೆಂದು ಮನವಿ ಮಾಡಿದರು.

ಆಟೋ ಚಾಲಕ ಮಾಲಕ ಸಂಘದ ಬೇಡಿಕೆಗೆ ಸ್ಪಂದಿಸಿದ ಶಾಸಕರು ಪುಂಜಾಲಕಟ್ಟೆ ಪುರಿಯ‌ ರಸ್ತೆಗೆ ತಾತ್ಕಾಲಿಕ ಪರಿಹಾರ ಹಾಗೂ ಜನವರಿಯಲ್ಲಿ ಮರು ಡಾಂಬರೀಕರಣ ಮಾಡಿಸುತ್ತೇನೆಂದು ಭರವಸೆ ನೀಡಿದರು ಹಾಗೂ ಪೆರ್ಡೇ ಕ್ರಾಸ್ ನಿಂದ ಉರ್ಲಾವರೆಗಿನ ಕಾಂಕ್ರೀಟ್ ರಸ್ತೆಯ ಕೆಲಸ ಒಂದು ವಾರದಲ್ಲಿ ಆರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಕೆಪಿಎಸ್ ಪುಂಜಾಲಕಟ್ಟೆ ಅಧ್ಯಕ್ಷ ದಿವಾಕರ್ ಶೆಟ್ಟಿ ಕಂಗಿತ್ತಿಲು, ಸ್ಪಂದನ ಆಟೋ ಚಾಲಕರ ಮಾಲಕರ ಸಂಘದ ಗೌರವ ಅಧ್ಯಕ್ಷರಾದ ಗ್ರೇಗೊರಿ ಮಿರಂದ, ಅಧ್ಯಕ್ಷರಾದ ರಘುವೀರ್ ಬಾಳಿಗ, ಕಾರ್ಯದರ್ಶಿ ಯೋಗೀಶ್ ಧರ್ಬೇ, ಜೊತೆ ಕಾರ್ಯದರ್ಶಿ ಕಿರಣ್ ಶೆಟ್ಟಿ, ಕೋಶಾಧಿಕಾರಿ ಜಯರಾಮ್ ಗರ್ಡಾಡಿ, ಮಾಲಾಡಿ ಪಂಚಾಯತ್ ಸದಸ್ಯರಾದ ಬೆನೆಡಿಕ್ಟ್ ಮಿರಂದ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

Suddi Udaya

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ರವರ ದರ್ಪಣ ಕವನ ಸಂಕಲನ ಬಿಡುಗಡೆ

Suddi Udaya

ಎಸ್ಐಟಿ ಸಲ್ಲಿಸಿದ ವರದಿಯ ಪ್ರತಿ ನೀಡಲು ಅರ್ಜಿ ಸಲ್ಲಿಕೆ: ಕೆಲವೊಂದು ವರದಿಯ ಪ್ರತಿ ನೀಡಲು ಕೋರ್ಟ್ ಒಪ್ಪಿಗೆ

Suddi Udaya

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

Suddi Udaya
error: Content is protected !!