23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ: ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯ ಒದಗಿಸುವ ಭರವಸೆ : ” ಸುದ್ದಿ ಉದಯ” ಸ್ಪೆಷಲ್ ರಿಪೋರ್ಟ್ ಇಫೇಕ್ಟ್

ಬೆಳ್ತಂಗಡಿ : ಮೂಲ ಸೌಕರ್ಯ ಇಲ್ಲದೆ ಕಳೆದ 10-15 ವರ್ಷಗಳಿಂದ ಯಾವುದೇ ದಾಖಲೆಗಳಿಲ್ಲದೆ ಸರಕಾರಿ ಜಾಗದಲ್ಲಿ ಸಿಮೆಂಟ್ ಬ್ಲಾಕ್ ಮತ್ತು ಸೀಟ್ ನಿಂದ ನಿರ್ಮಿಸಿದ ಕುಠೀರದಲ್ಲಿ ಹಬೆ ಬರುವ ನೆಲದಲ್ಲಿ ಒಂಬಟ್ಟಿಯಾಗಿ ವಾಸಿಸುತ್ತಿದ್ದ ಡೀಕಮ್ಮ(70) ಅವರ ಬದುಕಿನ ವ್ಯಥೆಯ ಕಥತನವನ್ನು ಸುದ್ದಿ ಉದಯ ವಾರ ಪತ್ರಿಕೆ ಜೂ.26 ರಂದು “ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು.

ವರದಿ ಪ್ರಕಟಗೊಂಡ ಬೆನ್ನಲ್ಲೇ ಅಳದಂಗಡಿ ಗ್ರಾಮ ಪಂಚಾಯತ್ ಗ್ರಾಮ ಆಡಳಿತಾಧಿಕಾರಿ ವಿಜೇತ್.ಬಿ ಮತ್ತು ಗ್ರಾ.ಪಂ ಸದಸ್ಯ ಪ್ರವೀಣ್ ಜೂ.26 ರಂದು 12:30 ಗಂಟೆಗೆ ಮನೆಗೆ ಭೇಟಿ ನೀಡಿ ಅಗತ್ಯ ದಾಖಲೆಗಳಾದ ಆಧಾರ್, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿಗಳನ್ನು ಮಾಡಿಕೊಡುವುದಾಗಿ ತಿಳಿಸಿದರು. ನಂತರದ ಹಂತದಲ್ಲಿ ಸದ್ರಿಯವರ ಜಂಟಿ ಖಾತೆಯಲ್ಲಿರುವ ಪಟ್ಟಾ ಸ್ಥಳದಲ್ಲಿ ಮನೆ ನಿರ್ಮಿಸುವ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್ ನೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದಾಗಿ ತಿಳಿಸಿದರು.

ಅಳದಂಗಡಿ ಗ್ರಾಮ ಪಂಚಾಯತ್ ಗ್ರಾಮ ಆಡಳಿತಾಧಿಕಾರಿ ವಿಜೇತ್ ಬಿ , ಗ್ರಾಮ ಪಂಚಾಯತ್ ಸದಸ್ಯರ ಪ್ರವೀಣ್, ಸ್ಥಳೀಯ ಸಂತೋಷ್ ಉಪಸ್ಥಿತರಿದ್ದರು.

Related posts

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

Suddi Udaya

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

Suddi Udaya

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya

ಮಂಗಳೂರು ಪಟ್ಲ ಫೌಂಡೇಶನ್ ಹವ್ಯಾಸಿ ಘಟಕದಿಂದ ತಾಳಮದ್ದಳೆ

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya
error: Content is protected !!