23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

ಉಜಿರೆ: ಉಜಿರೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಬದಿ ಸಾರ್ವಜನಿಕರು ಓಡಾಟ ನಡೆಸುವಲ್ಲಿ ಬಹಳಷ್ಟು ತೆರೆದ ಚರಂಡಿಗಳಿದ್ದು ಅಪಾಯದ ವಾತಾವರಣವನ್ನು ತಂದೊಡ್ಡಿದೆ.

ಚರಂಡಿ ನಿರ್ಮಾಣ ಕಾಮಗಾರಿ ಅಲ್ಲಲ್ಲಿ ನಡೆದಿದ್ದು ಹೆಚ್ಚಿನ ಕಡೆಗಳಲ್ಲಿ ಚರಂಡಿಗಳನ್ನು ಮುಚ್ಚಿಲ್ಲ, ಚರಂಡಿ ಪ್ರದೇಶಗಳಲ್ಲಿ ಸುಮಾರು 4 ಅಡಿ ಅಂತರದ ತೆರೆದ ಚರಂಡಿಗಳಿದ್ದು, ಪಾದಚಾರಿಗಳು ಬಿದ್ದು ಗಾಯಗೊಂಡ ಘಟನೆ ಇತ್ತೀಚಿಗೆ ಸೋಮಂತಡ್ಕದ ಪ್ರದೇಶದಲ್ಲಿ ನಡೆದಿದೆ.

ಉಜಿರೆ-ಚಾರ್ಮಾಡಿ ರಸ್ತೆಯ ಎಸ್.ಆರ್ ಬಾರ್ ಬಳಿಯ ಟೆಕ್ನೋ ಇಂಡಸ್ಟ್ರೀಸ್, ಗ್ಯಾರೇಜ್ ಮುಂಭಾಗದ 3,4 ಕಡೆಗಳಲ್ಲಿ ತೆರೆದ ಚರಂಡಿಗಳು ಇದ್ದು, ಸಮರ್ಪಕವಾದ ಬೀದಿ ದೀಪಗಳು ಇಲ್ಲದಿರುವ ಕಾರಣ ರಾತ್ರಿ ಹೊತ್ತು ಈ ಚರಂಡಿ ಮೇಲೆ ನಡೆದುಕೊಂಡು ಹೋಗುವುದು ಅಪಾಯವಾಗಿದೆ. ಈ ಚರಂಡಿಯ ನೀರು ನಿಡಿಗಲ್(ನೇತ್ರಾವತಿ) ನದಿಯನ್ನು ಸಂಪರ್ಕಿಸಿದ್ದು, ಬಾರ್ ಮುಂಭಾಗದಲ್ಲೇ ತೆರೆದ ಚರಂಡಿಗಳು ಇರುವ ಕಾರಣ ಕುಡುಕರು ಕುಡಿದ ಅಮಲಿನಲ್ಲಿ ತೇಲಾಡಿ ತೆರೆದ ಚರಂಡಿಯೊಳಗೆ ಬಿದ್ದರೆ ನಿಡಿಗಲ್(ನೇತ್ರಾವತಿ) ನದಿಯಲ್ಲಿ ಹುಡುಕುವ ಪ್ರಸಂಗ ನಡೆದೀತು.

ಈಗಾಗಲೇ ತಾಲೂಕಿನಲ್ಲಿ ಭಾರಿ ಪ್ರಮಾಣದಲ್ಲಿ ಶಂಕಿತ ಡೆಂಗೆ ಪ್ರಕರಣಗಳು ಕಂಡುಬಂದಿದ್ದು ತೆರೆದ ಚರಂಡಿ ಇರುವ ಪ್ರದೇಶಗಳ ಜನರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ತೆರೆದ ಚರಂಡಿ ಕುರಿತು ಆರೋಗ್ಯ ಇಲಾಖೆ, ಪಂಚಾಯಿತಿಗಳು ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸ.

Related posts

ಮುಂಡೂರುನಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ 4ನೇ ನೂತನ ಮುಂಡೂರು ಶಾಖೆಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಪ್ರದಾನ ಸಮಾರಂಭ

Suddi Udaya

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya
error: Content is protected !!