July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ : ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸ್ಥಾಪಕ ದಿನವನ್ನು ಖಿಲರ್ ಜುಮ್ಮಾ ಮಸೀದಿ ಇದರ ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಯವರು ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಖಿಲರ್ ಜುಮ್ಮಾ ಮಸೀದಿ ಇದರ ಮುಖ್ಯ ಖತೀಬರಾದ ಹನೀಫ್ ಪೈಝೀ ಯವರು ದುವಾ ನೆರವೇರಿಸಿ ಸಮಸ್ತ ನಡೆದು ಬಂದ ದಾರಿಯನ್ನು ವಿವರಿಸಿದರು. ಅದೇ ರೀತಿ ಈ ಬಾರಿಯ ಸಮಸ್ತದ ನೂರನೇ ಶತಮಾನೋತ್ಸವ ಕಾಸರಗೋಡಿನ ಉದ್ಯಮಿಯಾದ ಇಬ್ರಾಹಿಂ ಹಾಜಿ ಕುಣಿಯವರ ವಿಶಾಲವಾದ ಮೈದಾನದಲ್ಲಿ ನಡೆಯಲಿದೆ ಎಂದರು.



ಖಿಲರ್ ಜುಮ್ಮಾ ಮಸೀದಿ ಇದರ ಪ್ರಧಾನ ಕಾರ್ಯದರ್ಶಿ ಗಳಾದ ರಝಾಕ್ ಬಿ.ಎಚ್, ಕಾರ್ಯದರ್ಶಿಗಳಾದ ಮಹಮ್ಮದ್ ಕುದ್ರಡ್ಕ, ಸಮಿತಿ ಸದಸ್ಯರುಗಳಾದ ಅಬ್ದುಲ್ ರಹಮಾನ್, ಬಶೀರ್, ಶರೀಫ್ ಹಾಗೂ ಜಮಾತ್ ಬಾಂಧವರು ಉಪಸ್ಥಿತರಿದ್ದರು.

ಅಬ್ದುಲ್ ರಹಮಾನ್ ಮದನಿ ಸ್ವಾಗತಿಸಿ, ಅಶ್ರಫ್ ಮುಸ್ಲಿಯಾರ್ ವಂದಿಸಿದರು.ಮುಖ್ಯೋಪಾಧ್ಯಾಯರಾದ ಸಿದ್ಧಿಕ್ ಅಝ್ಹರಿ ಕಾರ್ಯಕ್ರಮ ನಿರೂಪಿಸಿದರು.

Related posts

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya

ಗುಡ್ಡ ಕುಸಿತದಂಥ ಪ್ರಕರಣ ಮತ್ತು ತಜ್ಞರ ಅಧ್ಯಯನ ವರದಿಗಳು ಭೂಕುಸಿತದ ಘೋರ ಪರಿಣಾಮಗಳನ್ನು ಜನರ ಮುಂದಿಟ್ಟಿದ್ದು ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿಸುವಂತೆ ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ರವರಿಂದ ಸಭಾಪತಿಗಳಿಗೆ ಮನವಿ

Suddi Udaya

ಗೇರುಕಟ್ಟೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು ವಿ. ಲಕ್ಷ್ಮೇ ಗೌಡ ಹೃದಯಾಘಾತದಿಂದ ನಿಧನ

Suddi Udaya

ಮಂಡ್ಯದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿ ಜಯಚಂದ್ರ ಬಂಧನ

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!