25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ : ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸ್ಥಾಪಕ ದಿನವನ್ನು ಖಿಲರ್ ಜುಮ್ಮಾ ಮಸೀದಿ ಇದರ ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಯವರು ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಖಿಲರ್ ಜುಮ್ಮಾ ಮಸೀದಿ ಇದರ ಮುಖ್ಯ ಖತೀಬರಾದ ಹನೀಫ್ ಪೈಝೀ ಯವರು ದುವಾ ನೆರವೇರಿಸಿ ಸಮಸ್ತ ನಡೆದು ಬಂದ ದಾರಿಯನ್ನು ವಿವರಿಸಿದರು. ಅದೇ ರೀತಿ ಈ ಬಾರಿಯ ಸಮಸ್ತದ ನೂರನೇ ಶತಮಾನೋತ್ಸವ ಕಾಸರಗೋಡಿನ ಉದ್ಯಮಿಯಾದ ಇಬ್ರಾಹಿಂ ಹಾಜಿ ಕುಣಿಯವರ ವಿಶಾಲವಾದ ಮೈದಾನದಲ್ಲಿ ನಡೆಯಲಿದೆ ಎಂದರು.



ಖಿಲರ್ ಜುಮ್ಮಾ ಮಸೀದಿ ಇದರ ಪ್ರಧಾನ ಕಾರ್ಯದರ್ಶಿ ಗಳಾದ ರಝಾಕ್ ಬಿ.ಎಚ್, ಕಾರ್ಯದರ್ಶಿಗಳಾದ ಮಹಮ್ಮದ್ ಕುದ್ರಡ್ಕ, ಸಮಿತಿ ಸದಸ್ಯರುಗಳಾದ ಅಬ್ದುಲ್ ರಹಮಾನ್, ಬಶೀರ್, ಶರೀಫ್ ಹಾಗೂ ಜಮಾತ್ ಬಾಂಧವರು ಉಪಸ್ಥಿತರಿದ್ದರು.

ಅಬ್ದುಲ್ ರಹಮಾನ್ ಮದನಿ ಸ್ವಾಗತಿಸಿ, ಅಶ್ರಫ್ ಮುಸ್ಲಿಯಾರ್ ವಂದಿಸಿದರು.ಮುಖ್ಯೋಪಾಧ್ಯಾಯರಾದ ಸಿದ್ಧಿಕ್ ಅಝ್ಹರಿ ಕಾರ್ಯಕ್ರಮ ನಿರೂಪಿಸಿದರು.

Related posts

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಶ್ರೀ ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ ವೈಭವ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಧಾರಾಕಾರವಾಗಿ ಸುರಿದ ಗಾಳಿ ಮಳೆ: ಮೇಲಂತಬೆಟ್ಟು ಕೆಲವು ಮನೆಗಳ ಮೇಲ್ಛಾವಣಿ ಕುಸಿತ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya
error: Content is protected !!