March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

ಬೆಳ್ತಂಗಡಿ: ತುಳುನಾಡಿನ ಸಾಂಸ್ಕೃತಿಕ ಅಧ್ಯಯನ ಮತ್ತು ಭಾಷಾ ಚಟುವಟಿಕೆಗಳಲ್ಲಿ ನಿರಂತರವಾಗಿ ಕೊಡುಗೆ ನೀಡುತ್ತಿರುವ ಡಾ. ದಿವಾಕರ ಕೆ. (ದಿವ ಕೊಕ್ಕಡ) ಅವರನ್ನು ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಘಟಕದ ಸಂಚಾಲಕರಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ.

ಈ ನೇಮಕಾತಿ ತುಳುನಾಡಿನ ಪರಂಪರೆ, ಸಂಸ್ಕೃತಿ ಮತ್ತು ಭಾಷೆಯ ಸಂರಕ್ಷಣೆಗೆ ನೂರಾರು ವರ್ಷಗಳಿಂದ ಶ್ರಮಿಸುತ್ತಿರುವ ಮಹಾಸಭೆಯ ಶತಮಾನೋತ್ಸವ ಪುನಶ್ಚೇತನ ಅಭಿಯಾನಕ್ಕೆ ಶಕ್ತಿಯುತ ಸಹಕಾರ ನೀಡಲಿದೆ ಎಂದು ಸಂಘಟಕರ ಅಭಿಪ್ರಾಯಪಟ್ಟಿದ್ದಾರೆ.

ಡಾ. ದಿವ ಕೊಕ್ಕಡ ಅವರು ಪ್ರಸ್ತುತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಕನ್ನಡ ಸಹಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಡಾ. ಹಾಮಾನಾ ಸಂಶೋಧನ ಕೇಂದ್ರದ ಸಂಯೋಜನಾಧಿಕಾರಿಗಳೂ ಆಗಿದ್ದಾರೆ. ತುಳುನಾಡಿನ ವಾರ್ಷಿಕ ಆಚರಣೆಗಳ ಕುರಿತು ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಹೆಚ್.ಡಿ. ಪದವಿ ಲಭಿಸಿದೆ.

Related posts

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya

ಬೆಳ್ತಂಗಡಿ: ಮಿಷ್ ಮಷ್ ಫ್ಯಾನ್ಸಿಯಲ್ಲಿ ಲಕ್ಕಿ ಡ್ರಾ: ರೂ.499 ರ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್

Suddi Udaya
error: Content is protected !!