22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

ಬೆಳ್ತಂಗಡಿ: ತುಳುನಾಡಿನ ಸಾಂಸ್ಕೃತಿಕ ಅಧ್ಯಯನ ಮತ್ತು ಭಾಷಾ ಚಟುವಟಿಕೆಗಳಲ್ಲಿ ನಿರಂತರವಾಗಿ ಕೊಡುಗೆ ನೀಡುತ್ತಿರುವ ಡಾ. ದಿವಾಕರ ಕೆ. (ದಿವ ಕೊಕ್ಕಡ) ಅವರನ್ನು ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಘಟಕದ ಸಂಚಾಲಕರಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ.

ಈ ನೇಮಕಾತಿ ತುಳುನಾಡಿನ ಪರಂಪರೆ, ಸಂಸ್ಕೃತಿ ಮತ್ತು ಭಾಷೆಯ ಸಂರಕ್ಷಣೆಗೆ ನೂರಾರು ವರ್ಷಗಳಿಂದ ಶ್ರಮಿಸುತ್ತಿರುವ ಮಹಾಸಭೆಯ ಶತಮಾನೋತ್ಸವ ಪುನಶ್ಚೇತನ ಅಭಿಯಾನಕ್ಕೆ ಶಕ್ತಿಯುತ ಸಹಕಾರ ನೀಡಲಿದೆ ಎಂದು ಸಂಘಟಕರ ಅಭಿಪ್ರಾಯಪಟ್ಟಿದ್ದಾರೆ.

ಡಾ. ದಿವ ಕೊಕ್ಕಡ ಅವರು ಪ್ರಸ್ತುತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಕನ್ನಡ ಸಹಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಡಾ. ಹಾಮಾನಾ ಸಂಶೋಧನ ಕೇಂದ್ರದ ಸಂಯೋಜನಾಧಿಕಾರಿಗಳೂ ಆಗಿದ್ದಾರೆ. ತುಳುನಾಡಿನ ವಾರ್ಷಿಕ ಆಚರಣೆಗಳ ಕುರಿತು ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಹೆಚ್.ಡಿ. ಪದವಿ ಲಭಿಸಿದೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಯವರ 106ನೇ ಜಯಂತಿ ಆಚರಣೆ

Suddi Udaya

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

Suddi Udaya

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya
error: Content is protected !!