September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

ಬೆಳ್ತಂಗಡಿ: ತುಳುನಾಡಿನ ಸಾಂಸ್ಕೃತಿಕ ಅಧ್ಯಯನ ಮತ್ತು ಭಾಷಾ ಚಟುವಟಿಕೆಗಳಲ್ಲಿ ನಿರಂತರವಾಗಿ ಕೊಡುಗೆ ನೀಡುತ್ತಿರುವ ಡಾ. ದಿವಾಕರ ಕೆ. (ದಿವ ಕೊಕ್ಕಡ) ಅವರನ್ನು ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಘಟಕದ ಸಂಚಾಲಕರಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ.

ಈ ನೇಮಕಾತಿ ತುಳುನಾಡಿನ ಪರಂಪರೆ, ಸಂಸ್ಕೃತಿ ಮತ್ತು ಭಾಷೆಯ ಸಂರಕ್ಷಣೆಗೆ ನೂರಾರು ವರ್ಷಗಳಿಂದ ಶ್ರಮಿಸುತ್ತಿರುವ ಮಹಾಸಭೆಯ ಶತಮಾನೋತ್ಸವ ಪುನಶ್ಚೇತನ ಅಭಿಯಾನಕ್ಕೆ ಶಕ್ತಿಯುತ ಸಹಕಾರ ನೀಡಲಿದೆ ಎಂದು ಸಂಘಟಕರ ಅಭಿಪ್ರಾಯಪಟ್ಟಿದ್ದಾರೆ.

ಡಾ. ದಿವ ಕೊಕ್ಕಡ ಅವರು ಪ್ರಸ್ತುತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಕನ್ನಡ ಸಹಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಡಾ. ಹಾಮಾನಾ ಸಂಶೋಧನ ಕೇಂದ್ರದ ಸಂಯೋಜನಾಧಿಕಾರಿಗಳೂ ಆಗಿದ್ದಾರೆ. ತುಳುನಾಡಿನ ವಾರ್ಷಿಕ ಆಚರಣೆಗಳ ಕುರಿತು ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಹೆಚ್.ಡಿ. ಪದವಿ ಲಭಿಸಿದೆ.

Related posts

ಬೆಳ್ತಂಗಡಿ : ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ: ಪ್ರಥಮ ಬಾರಿಗೆ ಭಜನೆಯಲ್ಲಿ ನಿನ್ನೆ ಇಂದು ನಾಳೆಯ ಬಗ್ಗೆ ಗಂಭೀರ ಚರ್ಚೆ

Suddi Udaya

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಸಚಿವರಿಂದ ಸಭೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 30ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ:

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya
error: Content is protected !!