25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

ಬೆಳ್ತಂಗಡಿ: ತುಳುನಾಡಿನ ಸಾಂಸ್ಕೃತಿಕ ಅಧ್ಯಯನ ಮತ್ತು ಭಾಷಾ ಚಟುವಟಿಕೆಗಳಲ್ಲಿ ನಿರಂತರವಾಗಿ ಕೊಡುಗೆ ನೀಡುತ್ತಿರುವ ಡಾ. ದಿವಾಕರ ಕೆ. (ದಿವ ಕೊಕ್ಕಡ) ಅವರನ್ನು ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಘಟಕದ ಸಂಚಾಲಕರಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ.

ಈ ನೇಮಕಾತಿ ತುಳುನಾಡಿನ ಪರಂಪರೆ, ಸಂಸ್ಕೃತಿ ಮತ್ತು ಭಾಷೆಯ ಸಂರಕ್ಷಣೆಗೆ ನೂರಾರು ವರ್ಷಗಳಿಂದ ಶ್ರಮಿಸುತ್ತಿರುವ ಮಹಾಸಭೆಯ ಶತಮಾನೋತ್ಸವ ಪುನಶ್ಚೇತನ ಅಭಿಯಾನಕ್ಕೆ ಶಕ್ತಿಯುತ ಸಹಕಾರ ನೀಡಲಿದೆ ಎಂದು ಸಂಘಟಕರ ಅಭಿಪ್ರಾಯಪಟ್ಟಿದ್ದಾರೆ.

ಡಾ. ದಿವ ಕೊಕ್ಕಡ ಅವರು ಪ್ರಸ್ತುತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಕನ್ನಡ ಸಹಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಡಾ. ಹಾಮಾನಾ ಸಂಶೋಧನ ಕೇಂದ್ರದ ಸಂಯೋಜನಾಧಿಕಾರಿಗಳೂ ಆಗಿದ್ದಾರೆ. ತುಳುನಾಡಿನ ವಾರ್ಷಿಕ ಆಚರಣೆಗಳ ಕುರಿತು ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಹೆಚ್.ಡಿ. ಪದವಿ ಲಭಿಸಿದೆ.

Related posts

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

Suddi Udaya

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya

ಎ.6-11: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ: ತುರ್ತು ಹಾಗೂ ಕಠಿಣ ಕಾನೂನು ಕ್ರಮಕ್ಕೆ ಗೃಹ ಸಚಿವರಲ್ಲಿ ಮನವಿ

Suddi Udaya

ಬೆಳ್ತಂಗಡಿ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರ್ಷ ಆಚರಣೆ

Suddi Udaya
error: Content is protected !!