25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೋಷಕರ ಸಭೆಯಲ್ಲಿ ವಿವಿಧ ದಾನಿಗಳು ನೀಡಿದ ಕೊಡುಗೆಗಳನ್ನು ಶಾಲೆಗೆ ಹಸ್ತಾಂತರ ಮಾಡಲಾಯಿತು.

ಶಾಲೆಯ ಐದನೇ ತರಗತಿಯ ನಿರ್ಗಮಿತ ವಿದ್ಯಾರ್ಥಿಗಳು ಊಟದ ತಟ್ಟೆಗಳನ್ನು ಇಡುವ ಕಬ್ಬಿಣದ ಸ್ಟ್ಯಾಂಡ್, ಶಾಲಾ ಹಿರಿಯ ವಿದ್ಯಾರ್ಥಿ ಲೋಕೇಶ್ ಓನಾಜೆಯವರು ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಹಾಗೂ ಬೆಳ್ತಂಗಡಿಯ ಮುಳಿಯ ಜುವ್ಯೆಲರ್ಸ್ ವತಿಯಿಂದ ಕೊಡೆಗಳನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ನಿರ್ಗಮಿತ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಾಧವ ಗೌಡರು ಎಲ್ಲಾ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ವೇದಿಕೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ.ಉಪಾಧ್ಯಕ್ಷರಾದ ಶ್ರೀಮತಿ ಲೇಖಾವತಿ, ನೂತನ ಎಸ್.ಡಿ‌.ಎಂ.ಸಿ.ಅಧ್ಯಕ್ಷರಾದ ಹರೀಶ್ ಕೆರಕೋಡಿ, ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಶ್ರೀಮತಿ ತೀರ್ಥಲತಾ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಅತಿಥಿ ಶಿಕ್ಷಕರಾದ ದಿನೇಶ್ ಕೆ. ಸ್ವಾಗತಿಸಿದರು. ಗೌರವ ಶಿಕ್ಷಕರಾದ ಕರಿಯಣ್ಣ ಗೌಡ ವಂದಿಸಿದರು.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ  ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಭೇಟಿ

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya
error: Content is protected !!