September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಪ್ರೌಢ ಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ

ಬೆಳಾಲು : ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಗೌರವ ರಾಜ್ಯಪಾಲ, ಶಾಲಾ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಕಾರ್ಯಕ್ರಮ ಉದ್ಘಾಟಿಸಿ ಪ್ರಮಾಣ ವಚನ ಬೋಧಿಸಿದರು. ಬಳಿಕ ಅವರು ಮಾತನಾಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ತಿಳಿದುಕೊಳ್ಳಲು ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸರ್ಕಾರ ಸಹಕಾರಿಯಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿ ನಾಯಕ ಮೋಹನ್ ಕೃಷ್ಣ ವಾರ್ಷಿಕ ಯೋಜನೆ ಮಂಡಿಸಿದರು. ಶಿಕ್ಷಕ ಕಿರಣ್ ಕಾರ್ಯಕ್ರಮ ಸಂಘಟಿಸಿದರು. ಇತರ ಶಿಕ್ಷಕರು ಉಪಸ್ಥಿತರಿದ್ದರು. ಉಪನಾಯಕಿ ನೇತ್ರಾವತಿ ಸ್ವಾಗತಿಸಿ, ವಿರೋಧ ಪಕ್ಷದ ನಾಯಕಿ ರಕ್ಷಾ ಎನ್. ವಂದಿಸಿದರು‌. ಕಾರ್ಯದರ್ಶಿ ಮನೀಷ್ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ “ಶ್ರೀ ಮಂಜುನಾಥ ಬನ್ನಿಸ್ ಟಂಟೋಲ”ಕ್ಕೆ ಚಾಲನೆ

Suddi Udaya

ಬೆಳ್ತಂಗಡಿ: ಮಾತೃ ವೃಂದ ಶಿಶುಪಾಲನ ಕೇಂದ್ರ ಉದ್ಘಾಟನೆ

Suddi Udaya

ವಿಶೇಷ ಚೇತನ ಮಕ್ಕಳಿಗೆ ನಲ್ಮೆ, ಸಂಯಮದಿಂದ ವಿಶೇಷ ಭವಿಷ್ಯ ರೂಪಿಸೋಣ: ಡಿ. ವೀರೇಂದ್ರ ಹೆಗ್ಗಡೆ

Suddi Udaya

ಗುರುವಾಯನಕೆರೆ -ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಕುಮಟಾ ನೆರೆಪೀಡಿತ ಪ್ರದೇಶಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ನೆರವು

Suddi Udaya
error: Content is protected !!