25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

ಉಜಿರೆ: ಅನುಗ್ರಹ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜೂ.27 ರಂದು ಅ ಅನುಗ್ರಹ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ವಂ ಫಾ ಅಬೆಲ್ ಲೋಬೊ, ಮುಖ್ಯ ಅತಿಥಿಯಾಗಿ ಹಾಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಮರ್ಲಿನ್ ಡಿಸೋಜಾಇವರು ಉಪಸ್ಥಿತರಿದ್ದರು


ಹೊಸದಾಗಿ ಆಯ್ಕೆಯಾದ ಶಾಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮಂತ್ರಿಮಂಡಲದ ನೂತನ ಸದಸ್ಯರಿಗೆ ಶಾಲಾ ಪ್ರಾಂಶುಪಾಲರಾದವಂ ಫಾ ವಿಜಯ್ ಲೋಬೋ ಇವರ ಪ್ರಮಾಣ ವಚನವನ್ನು ಬೋಧಿಸಿದರು.
ಪ್ರೌಢಶಾಲಾ ವಿದ್ಯಾರ್ಥಿ ನಾಯಕಿಯಾಗಿ ಕುಮಾರಿ ಮಿಶೆಲ್ ಪಿಂಟೋ ಉಪನಾಯಕನಾಗಿ ಶೌರ್ಯ ಕಾಮತ್ ಪ್ರಾಥಮಿಕ ಶಾಲಾ ವಿದ್ಯಾರ್ಥಿಯ ನಾಯಕಿಯಾಗಿ ಕುಮಾರಿ ಸಿಂಚನ ಉಪನಾಯಕನಾಗಿ ಸುಹಾನ್ ಮೊಂತೆರೊ ಹಾಗೂ ಇವರ ಜೊತೆಯಲ್ಲಿ ಮಂತ್ರಿಮಂಡಲದ ಇತರ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.


ಯುವ ನಾಯಕತ್ವದ ಭದ್ರತೆ ಕರ್ತವ್ಯ, ಜವಾಬ್ದಾರಿ ಹಾಗೂ ಅದರ ಅಗತ್ಯದ ಬಗ್ಗೆ ಮತ್ತು ಶಾಂತಿ ಸೌಹಾರ್ದತೆಯಿಂದ ರಾಷ್ಟ್ರಾಭಿಮಾನವನ್ನು ಮೈಗೂಡಿಸಿ ಇಂದಿನ ಯುವಪೀಳಿಗೆ ಬೆಳೆಯಬೇಕಾಗಿದೆ ಎಂದು ಸಂಚಾಲಕರಾದ ವಂ ಫಾ ಅಬೆಲ್ ಲೋಬೊ, ಮುಖ್ಯ ಅತಿಥಿಯಾದ ಮರ್ಲಿನ್ ಡಿಸೋಜಾ ಎಂದು ತಿಳಿಸಿದರು. ಪ್ರಾಂಶುಪಾಲರಾದ ವಂ ಫಾ ವಿಜಯ್ ಲೋಬೊ ಇವರು ಮಂತ್ರಿಮಂಡಲದ ಸದಸ್ಯರಿಗೆ ತಮ್ಮ ಕರ್ತವ್ಯದ ಬಗ್ಗೆ ತಿಳಿಸಿದರು. ಪ್ರಮಾಣವಚನ ಸ್ವೀಕರಿಸಿದ ಮಂತ್ರಿಮಂಡಲದ ಸರ್ವಸದಸ್ಯರಿಗೆ ಶುಭವನ್ನು ಹಾರೈಸಿದರು. ಸಹಶಿಕ್ಷಕಿ ವಿನಯಲತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ಲಾಯಿಲ: ಬಜಕ್ಕಿರೆಸಾಲು ಬಳಿ ಚಿರತೆ ಓಡಾಟ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವದೇಶಿ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!