23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

ಉಜಿರೆ: ಅನುಗ್ರಹ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜೂ.27 ರಂದು ಅ ಅನುಗ್ರಹ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ವಂ ಫಾ ಅಬೆಲ್ ಲೋಬೊ, ಮುಖ್ಯ ಅತಿಥಿಯಾಗಿ ಹಾಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಮರ್ಲಿನ್ ಡಿಸೋಜಾಇವರು ಉಪಸ್ಥಿತರಿದ್ದರು


ಹೊಸದಾಗಿ ಆಯ್ಕೆಯಾದ ಶಾಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮಂತ್ರಿಮಂಡಲದ ನೂತನ ಸದಸ್ಯರಿಗೆ ಶಾಲಾ ಪ್ರಾಂಶುಪಾಲರಾದವಂ ಫಾ ವಿಜಯ್ ಲೋಬೋ ಇವರ ಪ್ರಮಾಣ ವಚನವನ್ನು ಬೋಧಿಸಿದರು.
ಪ್ರೌಢಶಾಲಾ ವಿದ್ಯಾರ್ಥಿ ನಾಯಕಿಯಾಗಿ ಕುಮಾರಿ ಮಿಶೆಲ್ ಪಿಂಟೋ ಉಪನಾಯಕನಾಗಿ ಶೌರ್ಯ ಕಾಮತ್ ಪ್ರಾಥಮಿಕ ಶಾಲಾ ವಿದ್ಯಾರ್ಥಿಯ ನಾಯಕಿಯಾಗಿ ಕುಮಾರಿ ಸಿಂಚನ ಉಪನಾಯಕನಾಗಿ ಸುಹಾನ್ ಮೊಂತೆರೊ ಹಾಗೂ ಇವರ ಜೊತೆಯಲ್ಲಿ ಮಂತ್ರಿಮಂಡಲದ ಇತರ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.


ಯುವ ನಾಯಕತ್ವದ ಭದ್ರತೆ ಕರ್ತವ್ಯ, ಜವಾಬ್ದಾರಿ ಹಾಗೂ ಅದರ ಅಗತ್ಯದ ಬಗ್ಗೆ ಮತ್ತು ಶಾಂತಿ ಸೌಹಾರ್ದತೆಯಿಂದ ರಾಷ್ಟ್ರಾಭಿಮಾನವನ್ನು ಮೈಗೂಡಿಸಿ ಇಂದಿನ ಯುವಪೀಳಿಗೆ ಬೆಳೆಯಬೇಕಾಗಿದೆ ಎಂದು ಸಂಚಾಲಕರಾದ ವಂ ಫಾ ಅಬೆಲ್ ಲೋಬೊ, ಮುಖ್ಯ ಅತಿಥಿಯಾದ ಮರ್ಲಿನ್ ಡಿಸೋಜಾ ಎಂದು ತಿಳಿಸಿದರು. ಪ್ರಾಂಶುಪಾಲರಾದ ವಂ ಫಾ ವಿಜಯ್ ಲೋಬೊ ಇವರು ಮಂತ್ರಿಮಂಡಲದ ಸದಸ್ಯರಿಗೆ ತಮ್ಮ ಕರ್ತವ್ಯದ ಬಗ್ಗೆ ತಿಳಿಸಿದರು. ಪ್ರಮಾಣವಚನ ಸ್ವೀಕರಿಸಿದ ಮಂತ್ರಿಮಂಡಲದ ಸರ್ವಸದಸ್ಯರಿಗೆ ಶುಭವನ್ನು ಹಾರೈಸಿದರು. ಸಹಶಿಕ್ಷಕಿ ವಿನಯಲತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya

ಲಾಯಿಲ: ಆಟೋಚಾಲಕ ನಾಗೇಶ್ ನಿಧನ

Suddi Udaya

ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಮನೋಹರ್ ಬಳಂಜ ಪುನರಾಯ್ಕೆ

Suddi Udaya

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

Suddi Udaya
error: Content is protected !!