23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ವಿದ್ಯಾ ಭಾರತಿ ಉಚ್ಚ ಶಿಕ್ಷಾ ಸಂಸ್ಥಾನ ಕರ್ನಾಟಕ ಮತ್ತು ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಭಾರತ್ ಬೋಧ್ ಮಾಲಾ ಉಪನ್ಯಾಸ ಮಾಲಿಕೆಯಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ವಿದುಷಿ ಮಂಜುಳಾ ಸುಬ್ರಹ್ಮಣ್ಯರವರು ಸಂಗೀತ ಮತ್ತು ನೃತ್ಯ, ಪರಿಸರದಿಂದ ಸಿಕ್ಕಿರುವಂತಹದು. ಪ್ರತಿಯೊಂದು ಧ್ವನಿಯೂ ಕಲಾವಿದನಿಗೆ ಸಂಗೀತದಂತೆ ಕಾಣುತ್ತದೆ. ಮರಗಳು ಮತ್ತು ನದಿಗಳ ಚಲನೆ ಕಲಾವಿದನಿಗೆ ನೃತ್ಯವಾಗಿ ಕಾಣುವುದರೊಂದಿಗೆ ಏಕಾಗ್ರತೆ ಲಭಿಸುತ್ತದೆ ಹಾಗು ನವರಸಗಳು, ನೃತ್ಯ, ಸಂಗೀತ ಮತ್ತು ಸಂಭಾಷಣೆಯ ಏರಿಳಿತದ ಕುರಿತು ಪ್ರಾಯೋಗಿಕವಾಗಿ ತರಬೇತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂತೋಷ ಸಲ್ಡಾನ ರವರು ವಹಿಸಿ ಭಾಷೆ ಕಲಿಕೆಯಿಂದಾಗಿ ನಟನೆ ಮರೆಯುತ್ತೇವೆ. ಸಂಗೀತ, ನೃತ್ಯ, ಶಿಕ್ಷಕರ ಬೋಧನೆಗೆ ಸಹಾಯಕ. ಶಿಕ್ಷಕರಿಗೆ ನವರಸಗಳ ಬಗ್ಗೆ ಅರಿವಿದ್ದಾಗ ಉತ್ತಮ ಗುರುವಾಗಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ಕಾರ್ಯಕ್ರಮದಲ್ಲಿ ವಿದುಷಿ ಮಂಜುಳ ಸುಬ್ರಹ್ಮಣ್ಯರ ಶಿಷ್ಯೆಯಾದ ಕುಮಾರಿ ಅವನಿ ಬೆಳ್ಳಾರೆ ಹಾಗೂ ಕಾಲೇಜಿನ ಉಪನ್ಯಾಸಕರು, ಬಿ.ಎಡ್. ಮತ್ತು ಡಿ.ಎಡ್. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರಥಮ ಬಿ.ಎಡ್. ಪ್ರಶಿಕ್ಷಣಾರ್ಥಿಗಳಾದ ಪೂಜಶ್ರೀ ಅತಿಥಿ ಪರಿಚಯ ಮಾಡಿ, ಶ್ವೇತಾ ಎಂ ಎಸ್ ಸ್ವಾಗತಿಸಿ, ಹರ್ಷಿತಾ ವಂದಿಸಿ, ಶ್ರವಣ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya
error: Content is protected !!