September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

ಬೆಳ್ತಂಗಡಿ : ದೂರ ದೃಷ್ಟಿಯ ಆಡಳಿತಗಾರರಾಗಿ ಸಮೃದ್ಧವಾದ ಬೆಂಗಳೂರು ನಗರವನ್ನು ನಿರ್ಮಿಸಲು ಶ್ರಮಿಸಿದ ಕೆಂಪೇಗೌಡರು ಈ ನಾಡು ಕಂಡ ಮಹಾನ್ ವ್ಯಕ್ತಿಯಾಗಿದ್ದಾರೆ ಎಂದು ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಆನಂದ ಗೌಡ ಹೇಳಿದರು.


ಅವರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ.ರಿ ಬೆಳ್ತಂಗಡಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಜರಗಿದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ನೀಡುತ್ತಾ, ಕೆಂಪೇಗೌಡರು ತನ್ನ ಆಡಳಿತ ಕೌಶಲ್ಯದಿಂದ ಬೆಂಗಳೂರನ್ನು ವ್ಯಾಪಾರ, ವಾಣಿಜ್ಯ, ಕೃಷಿ ಚಟುವಟಿಕೆಗಳ ಕೇಂದ್ರವನ್ನಾಗಿ ಮಾಡಿದ್ದಲ್ಲದೆ ಜನರ ಬಳಕೆಗೆ ನೀರಾವರಿಗಾಗಿ ಹಲವಾರು ಕೆರೆಗಳನ್ನು ನಿರ್ಮಿಸಿದ್ದರು. ಪ್ರತಿಯೊಂದು ವೃತ್ತಿ ಬಾಂಧವರಿಗೂ ಇಲ್ಲಿ ಮಹತ್ವವನ್ನು ನೀಡಿದ್ದು ಪ್ರಜಾ ಹಿತವನ್ನು ಕಾಪಾಡಿದ್ದರು. ಇಂದು ಶಿಕ್ಷಣ, ಉದ್ಯಮ ಕ್ಷೇತ್ರಗಳಲ್ಲಿ ಅತ್ಯುನ್ನತ ಸಾಧನೆಯನ್ನು ಮಾಡುತ್ತಿರುವ ಬೆಂಗಳೂರಿನಡೆಗೆ ಇಡೀ ಜಗತ್ತೇ ಕಣ್ಣು ಹಾಯಿಸುವಂತಾಗಿದೆ. ಇದೆಲ್ಲರ ನಿರ್ಮಾತೃ ಕೆಂಪೇಗೌಡರನ್ನು ಸ್ಮರಿಸುವುದು ಆದ್ಯ ಕರ್ತವ್ಯವಾಗಿದೆ ಎಂದರು.


ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾದ ಪಿ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾದ ಜಯಾನಂದ ಗೌಡ.ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷ ನಾರಾಯಣಗೌಡ ದೇವಸ್ಯ, ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ ಅನಾರ್, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ಮಾಜಿ ಕಾರ್ಯದರ್ಶಿ ದುಗ್ಗಪ್ಪ ಗೌಡ, ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ವಾಣಿ ಆಂಗ್ಲ ಮಾಧ್ಯಮ ಪ್ರಾರ್ಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಸುಹಾಸಿನಿ ಉಪಸಿತರಿದ್ದರು.


ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಧನ್ಯವಾದವಿತ್ತರು. ಉಪನ್ಯಾಸಕ ಬೆಳಿಯಪ್ಪ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

Suddi Udaya

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

Suddi Udaya

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಆಚರಣೆ

Suddi Udaya

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya
error: Content is protected !!