July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ 175 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ವೆನ್ಲಾಕ್ ರಕ್ಷಾ ಸಮಿತಿ

ಧರ್ಮಸ್ಥಳ: ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಗೆ 175 ನೇ ವರ್ಷ ತುಂಬಿದ ಪ್ರಯುಕ್ತ ಸಂಭ್ರಮಾಚರಣೆಯು ಬರುವ ಸೆಪ್ಟೆಂಬರ್ 14 ರಂದು ವೆನ್ಲಾಕ್, ಲೇಡಿಗೋಷನ್, ಕೆ. ಎಮ್.ಸಿ. ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷ ಯು.ಟಿ ಖಾದರ್, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಸೇರಿದಂತೆ ಹಲವಾರು ಸಚಿವರು, ಸಂಸದರು, ರಾಜ್ಯಸಭಾ ಸದಸ್ಯರು, ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ನಿಗಮ ಮಂಡಳಿಯ ಅಧ್ಯಕ್ಷರುಗಳು, ಜಿಲ್ಲೆಯ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಮುಂದಿನ ಭಾಗವಾಗಿ ಜೂ. 26ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಅಧೀಕ್ಷಕರಾದ ಡಾ.ಶಿವಪ್ರಕಾಶ್ ಡಿ.ಎಸ್. ನೇತೃತ್ವದಲ್ಲಿ ಬೇಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ಪಲಿಯೇಟಿವ್ ಮೆಡಿಕಲ್ ಆಫೀಸರ್ ಡಾ. ಅನ್ನಯ್ಯ ಕುಲಾಲ್, ಪಿಸಿಷಿಯನ್ ಡಾ.ವಿಜಯ ಕುಮಾರ್, ರಕ್ಷಾ ಸಮಿತಿಯ ಪದ್ಮನಾಭ ಅಮೀನ್, ಅಬ್ದುಲ್ ಕರೀಮ್ ಗೇರುಕಟ್ಟೆ, ಶಶಿದರ್ ಬಜಾಲ್, ಅಬ್ದುಲ್ ಸಲೀಮ್, ಶ್ರೀಮತಿ ಪ್ರಮೀಳಾ, ದಾಮೋದರ್ ಪುತ್ತೂರು, ಜಯರಾಮ ಬೆಳ್ತಂಗಡಿ, ವಕ್ಫ್ ಸಲಹಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಸಹಾಯಕ ಆಡಳಿತಾಧಿಕಾರಿಗಳಾದ ಶ್ರೀಮತಿ ವಿದ್ಯಾ ಬಿ,ಕಛೇರಿ ಅಧೀಕ್ಷಕರಾದ ಅಶೋಕ್ ರಾಜನಾಲ್, ದ್ವಿತೀಯ ದರ್ಜೆ ಸಹಾಯಕ ಎ.ಕ್ಲೆರೆನ್ಸ್ ರಾಜ್,ಸಿಬ್ಬಂದಿ ಸಿದ್ದಪ್ಪ ಹಾಗೂ ಉಸ್ಮಾನ್ ಕೆ.ಪಿ.ಕಾಜೂರು ಹಾಜರಿದ್ದರು.

Related posts

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಮಲವಂತಿಗೆ: ರೂ.4ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ – ಸೇತುವೆ ಲೋಕಾರ್ಪಣೆ

Suddi Udaya

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

Suddi Udaya

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

Suddi Udaya
error: Content is protected !!