September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ನೀರು: ಬಂಗಾಡಿ ಸಿಎ ಬ್ಯಾಂಕ್ ಹಾಗೂ ಜೈನ ಬಸದಿ ವತಿಯಿಂದ ಪೈಪ್ ಅಳವಡಿಕೆ: “ಸುದ್ದಿ ಉದಯ ಜನಧ್ವನಿ Effect”

ಬಂಗಾಡಿ: ಬಂಗಾಡಿ ಜೈನ ಬಸದಿ ಎದುರು ಜೂ.25 ರಂದು ಅತಿಯಾದ ಮಳೆಯಿಂದಾಗಿ ಚರಂಡಿ ನಿರ್ವಹಣೆ ಇಲ್ಲದೆ ರಸ್ತೆಯಲ್ಲೇ ಮಳೆಯ ನೀರು ಹರಿದಿದೆ ಎಂದು ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿ ಪ್ರಕಟಗೊಂಡಿತು. ಈ ಬಗ್ಗೆ ಎಚ್ಚೆತ್ತ ಬಂಗಾಡಿ ವ್ಯವಸಾಯಕ ಸಹಕಾರಿ ಸಂಘ ಹಾಗೂ ಬಂಗಾಡಿ ಜೈನ ಬಸದಿ ಹಾಗೂ ಸ್ಥಳೀಯ ಮನೆಯವರ ಸಹಕಾರದಿಂದ ಪೈಪ್ ಅಳವಡಿಸಿ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಿದರು.

ಚರಂಡಿ ಅತೀ ಸಣ್ಣದು ಪ್ರತೀ ವರ್ಷ ಇಲ್ಲಿ ಮಳೆ ಬಂದರೆ ನೀರೆಲ್ಲಾ ಚರಂಡಿ ಇಲ್ಲದೆ ಮಾರ್ಗದಲ್ಲೇ ಹರಿಯುತ್ತದೆ. ನೀರು ತುಂಬಿ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರಿಗೆ , ಶಾಲಾ ಮಕ್ಕಳಿಗೆ ಕಷ್ಟವಾಗುತ್ತಿದೆ. ಪ್ರತೀ ವರ್ಷ ಮಳೆ ಬಂದರೆ ಇದೇ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದು ವರದಿ ಪ್ರಕಟಿಸಿದ ಕೂಡಲೇ ಸ್ಪಂದಿಸಿ ದುರಸ್ತಿ ವ್ಯವಸ್ಥೆಯನ್ನು ಮಾಡಿದರು.

Related posts

ಬೆಂಗಳೂರಿನಲ್ಲಿರುವ ಯೂಟ್ಯೂಬರ್ ಸಮೀರ್.ಎಂ.ಡಿ ರವರ ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರ ದಾಳಿ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ ಪೋಸ್ಟ್: ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದಲಿತ ಸಂಘರ್ಷ ಸಮಿತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!