September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

ಉಜಿರೆ: ಅನುಗ್ರಹ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜೂ.27 ರಂದು ಅ ಅನುಗ್ರಹ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ವಂ ಫಾ ಅಬೆಲ್ ಲೋಬೊ, ಮುಖ್ಯ ಅತಿಥಿಯಾಗಿ ಹಾಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಮರ್ಲಿನ್ ಡಿಸೋಜಾಇವರು ಉಪಸ್ಥಿತರಿದ್ದರು


ಹೊಸದಾಗಿ ಆಯ್ಕೆಯಾದ ಶಾಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮಂತ್ರಿಮಂಡಲದ ನೂತನ ಸದಸ್ಯರಿಗೆ ಶಾಲಾ ಪ್ರಾಂಶುಪಾಲರಾದವಂ ಫಾ ವಿಜಯ್ ಲೋಬೋ ಇವರ ಪ್ರಮಾಣ ವಚನವನ್ನು ಬೋಧಿಸಿದರು.
ಪ್ರೌಢಶಾಲಾ ವಿದ್ಯಾರ್ಥಿ ನಾಯಕಿಯಾಗಿ ಕುಮಾರಿ ಮಿಶೆಲ್ ಪಿಂಟೋ ಉಪನಾಯಕನಾಗಿ ಶೌರ್ಯ ಕಾಮತ್ ಪ್ರಾಥಮಿಕ ಶಾಲಾ ವಿದ್ಯಾರ್ಥಿಯ ನಾಯಕಿಯಾಗಿ ಕುಮಾರಿ ಸಿಂಚನ ಉಪನಾಯಕನಾಗಿ ಸುಹಾನ್ ಮೊಂತೆರೊ ಹಾಗೂ ಇವರ ಜೊತೆಯಲ್ಲಿ ಮಂತ್ರಿಮಂಡಲದ ಇತರ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.


ಯುವ ನಾಯಕತ್ವದ ಭದ್ರತೆ ಕರ್ತವ್ಯ, ಜವಾಬ್ದಾರಿ ಹಾಗೂ ಅದರ ಅಗತ್ಯದ ಬಗ್ಗೆ ಮತ್ತು ಶಾಂತಿ ಸೌಹಾರ್ದತೆಯಿಂದ ರಾಷ್ಟ್ರಾಭಿಮಾನವನ್ನು ಮೈಗೂಡಿಸಿ ಇಂದಿನ ಯುವಪೀಳಿಗೆ ಬೆಳೆಯಬೇಕಾಗಿದೆ ಎಂದು ಸಂಚಾಲಕರಾದ ವಂ ಫಾ ಅಬೆಲ್ ಲೋಬೊ, ಮುಖ್ಯ ಅತಿಥಿಯಾದ ಮರ್ಲಿನ್ ಡಿಸೋಜಾ ಎಂದು ತಿಳಿಸಿದರು. ಪ್ರಾಂಶುಪಾಲರಾದ ವಂ ಫಾ ವಿಜಯ್ ಲೋಬೊ ಇವರು ಮಂತ್ರಿಮಂಡಲದ ಸದಸ್ಯರಿಗೆ ತಮ್ಮ ಕರ್ತವ್ಯದ ಬಗ್ಗೆ ತಿಳಿಸಿದರು. ಪ್ರಮಾಣವಚನ ಸ್ವೀಕರಿಸಿದ ಮಂತ್ರಿಮಂಡಲದ ಸರ್ವಸದಸ್ಯರಿಗೆ ಶುಭವನ್ನು ಹಾರೈಸಿದರು. ಸಹಶಿಕ್ಷಕಿ ವಿನಯಲತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆ: ಕಾಂಗ್ರೆಸ್ ಬೆಂಬಲಿತ ಜಯವಿಕ್ರಮ್ ಗೆ ಸೋಲು

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya

ತೀರಾ ಹದಗೆಟ್ಟ ಮಚ್ಚಿನ ಪುರುಷರ ಮಜಲು ಕಲಾಯಿ ರಸ್ತೆ : ಶಾಲಾ ಮಕ್ಕಳ ಪರದಾಟ; ದುರಸ್ತಿಗೆ ಸ್ಥಳೀಯರ ಒತ್ತಾಯ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

Suddi Udaya
error: Content is protected !!