23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

ಅಳದಂಗಡಿ: “ ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಎಂಬ ಶೀರ್ಷಿಕೆ ಅಡಿಯಲ್ಲಿ ಬೆಳ್ತಂಗಡಿ ಸುದ್ದಿ ಉದಯ ವಾರ ಪತ್ರಿಕೆ ಜೂ.26 ರಂದು ವರದಿ ಪ್ರಕಟಿಸಿತ್ತು. ಇದಾದ ಬಳಿಕ ಒಂದಲ್ಲಾ ಒಂದು ಬೆಳವಣಿಗೆ ಆಗುತ್ತಿದ್ದು ಅಜ್ಜಿಯ ವ್ಯಥೆಗೆ ಮುಕ್ತಿಯ ಹಾದಿಗಲು ಕಾಣುತ್ತಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅವರ ಸೂಚನೆ ಮೇರೆಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಅಧಿಕಾರಿಗಳು ಜೂನ್ 27 ರಂದು ಸಂಜೆ ಡೀಕಮ್ಮ ಅಜ್ಜಿ ಮನೆಗೆ ಭೇಟಿ ನೀಡಿ ವಾಸ್ತವ್ಯ ದೃಢೀಕರಣ ಪತ್ರ ಹಾಗೂ ಆಹಾರ ಸಾಮಗ್ರಿಗಳ ಕಿಟ್ ನೀಡಿದರು. ಡೀಕಮ್ಮ ಅಜ್ಜಿಗೆ ವೋಟರ್ ಐಡಿ ಅರ್ಜಿ ಭರ್ತಿ ಮಾಡಿ ಚುನಾವಣಾ ಆಯೋಗದ ಸೈಟ್ ಗೆ ಅಪ್ ಲೋಡ್ ಮಾಡಲಾಗಿದೆ.ಇನ್ನೂ ಆಧಾರ್ ಮತ್ತು ಪಡಿತರ ಚೀಟಿ ಕೂಡ ಮಾಡಿ ಕೊಡಲಿದ್ದಾರೆ ಅಧಿಕಾರಿಗಳು.

ಸುದ್ದಿ ಉದಯ ವಾರ ಪತ್ರಿಕೆ ಬೆಳ್ತಂಗಡಿಯ ಜನರ ಧ್ವನಿಯಾಗಿ ಹಲವಾರು ವಿಶೇಷ ವರದಿಗಳನ್ನು ಪ್ರಕಟಿಸುತ್ತಿದೆ. ಜನಧ್ವನಿ ಎಂಬ ಶಿರ್ಷಿಕೆಯಡಿಯಲ್ಲಿ ಸುದ್ದಿಗಳನ್ನು ಬಿತ್ತರಿಸುತ್ತಿದೆ. ಹಲವಾರು ವಿಶೇಷ ವರದಿಗಳು ಪ್ರಕಟಗೊಂಡ ಬೆನ್ನಲ್ಲೇ ಪರಿಹಾರ ಹಾದಿ ಕೂಡ ಸಿಕ್ಕಿದೆ. ಇನ್ನೂ ಡೀಕಮ್ಮ ಅಜ್ಜಿಯ ವ್ಯಥೆಗೆ ಅಧಿಕಾರಿಗಳು ಸ್ಪಂದನೆ ನೀಡುವ ಮೂಲಕ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಪಾತ್ರರಾಗಿದ್ದಾರೆ. ಸುದ್ದಿ ಉದಯ ವಾರ ಪತ್ರಿಕೆಯ ವರದಿಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಜೊತೆಯಲ್ಲಿ ಅಳದಂಗಡಿ ಗ್ರಾಮ ಆಡಳಿತಾಧಿಕಾರಿ ವಿಜೇತ್.ಬಿ, ವೇಣೂರು ಆರ್.ಐ.ಕುಮಾರ್ ಸ್ವಾಮಿ, ಗ್ರಾಮ ಸಹಾಯಕಿ ಶಾರದಾ ,ಚಾಲಕ ಸಂತೋಷ್, ಸ್ಥಳೀಯ ನಿವಾಸಿ ಸಂತೋಷ್ ಜೊತೆಯಿದ್ದರು.

Related posts

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya
error: Content is protected !!