23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

ಅಳದಂಗಡಿ: “ ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಎಂಬ ಶೀರ್ಷಿಕೆ ಅಡಿಯಲ್ಲಿ ಬೆಳ್ತಂಗಡಿ ಸುದ್ದಿ ಉದಯ ವಾರ ಪತ್ರಿಕೆ ಜೂ.26 ರಂದು ವರದಿ ಪ್ರಕಟಿಸಿತ್ತು. ಇದಾದ ಬಳಿಕ ಒಂದಲ್ಲಾ ಒಂದು ಬೆಳವಣಿಗೆ ಆಗುತ್ತಿದ್ದು ಅಜ್ಜಿಯ ವ್ಯಥೆಗೆ ಮುಕ್ತಿಯ ಹಾದಿಗಲು ಕಾಣುತ್ತಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅವರ ಸೂಚನೆ ಮೇರೆಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಅಧಿಕಾರಿಗಳು ಜೂನ್ 27 ರಂದು ಸಂಜೆ ಡೀಕಮ್ಮ ಅಜ್ಜಿ ಮನೆಗೆ ಭೇಟಿ ನೀಡಿ ವಾಸ್ತವ್ಯ ದೃಢೀಕರಣ ಪತ್ರ ಹಾಗೂ ಆಹಾರ ಸಾಮಗ್ರಿಗಳ ಕಿಟ್ ನೀಡಿದರು. ಡೀಕಮ್ಮ ಅಜ್ಜಿಗೆ ವೋಟರ್ ಐಡಿ ಅರ್ಜಿ ಭರ್ತಿ ಮಾಡಿ ಚುನಾವಣಾ ಆಯೋಗದ ಸೈಟ್ ಗೆ ಅಪ್ ಲೋಡ್ ಮಾಡಲಾಗಿದೆ.ಇನ್ನೂ ಆಧಾರ್ ಮತ್ತು ಪಡಿತರ ಚೀಟಿ ಕೂಡ ಮಾಡಿ ಕೊಡಲಿದ್ದಾರೆ ಅಧಿಕಾರಿಗಳು.

ಸುದ್ದಿ ಉದಯ ವಾರ ಪತ್ರಿಕೆ ಬೆಳ್ತಂಗಡಿಯ ಜನರ ಧ್ವನಿಯಾಗಿ ಹಲವಾರು ವಿಶೇಷ ವರದಿಗಳನ್ನು ಪ್ರಕಟಿಸುತ್ತಿದೆ. ಜನಧ್ವನಿ ಎಂಬ ಶಿರ್ಷಿಕೆಯಡಿಯಲ್ಲಿ ಸುದ್ದಿಗಳನ್ನು ಬಿತ್ತರಿಸುತ್ತಿದೆ. ಹಲವಾರು ವಿಶೇಷ ವರದಿಗಳು ಪ್ರಕಟಗೊಂಡ ಬೆನ್ನಲ್ಲೇ ಪರಿಹಾರ ಹಾದಿ ಕೂಡ ಸಿಕ್ಕಿದೆ. ಇನ್ನೂ ಡೀಕಮ್ಮ ಅಜ್ಜಿಯ ವ್ಯಥೆಗೆ ಅಧಿಕಾರಿಗಳು ಸ್ಪಂದನೆ ನೀಡುವ ಮೂಲಕ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಪಾತ್ರರಾಗಿದ್ದಾರೆ. ಸುದ್ದಿ ಉದಯ ವಾರ ಪತ್ರಿಕೆಯ ವರದಿಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಜೊತೆಯಲ್ಲಿ ಅಳದಂಗಡಿ ಗ್ರಾಮ ಆಡಳಿತಾಧಿಕಾರಿ ವಿಜೇತ್.ಬಿ, ವೇಣೂರು ಆರ್.ಐ.ಕುಮಾರ್ ಸ್ವಾಮಿ, ಗ್ರಾಮ ಸಹಾಯಕಿ ಶಾರದಾ ,ಚಾಲಕ ಸಂತೋಷ್, ಸ್ಥಳೀಯ ನಿವಾಸಿ ಸಂತೋಷ್ ಜೊತೆಯಿದ್ದರು.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

Suddi Udaya

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya
error: Content is protected !!