22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

ಅಳದಂಗಡಿ: “ ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಎಂಬ ಶೀರ್ಷಿಕೆ ಅಡಿಯಲ್ಲಿ ಬೆಳ್ತಂಗಡಿ ಸುದ್ದಿ ಉದಯ ವಾರ ಪತ್ರಿಕೆ ಜೂ.26 ರಂದು ವರದಿ ಪ್ರಕಟಿಸಿತ್ತು. ಇದಾದ ಬಳಿಕ ಒಂದಲ್ಲಾ ಒಂದು ಬೆಳವಣಿಗೆ ಆಗುತ್ತಿದ್ದು ಅಜ್ಜಿಯ ವ್ಯಥೆಗೆ ಮುಕ್ತಿಯ ಹಾದಿಗಲು ಕಾಣುತ್ತಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅವರ ಸೂಚನೆ ಮೇರೆಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಅಧಿಕಾರಿಗಳು ಜೂನ್ 27 ರಂದು ಸಂಜೆ ಡೀಕಮ್ಮ ಅಜ್ಜಿ ಮನೆಗೆ ಭೇಟಿ ನೀಡಿ ವಾಸ್ತವ್ಯ ದೃಢೀಕರಣ ಪತ್ರ ಹಾಗೂ ಆಹಾರ ಸಾಮಗ್ರಿಗಳ ಕಿಟ್ ನೀಡಿದರು. ಡೀಕಮ್ಮ ಅಜ್ಜಿಗೆ ವೋಟರ್ ಐಡಿ ಅರ್ಜಿ ಭರ್ತಿ ಮಾಡಿ ಚುನಾವಣಾ ಆಯೋಗದ ಸೈಟ್ ಗೆ ಅಪ್ ಲೋಡ್ ಮಾಡಲಾಗಿದೆ.ಇನ್ನೂ ಆಧಾರ್ ಮತ್ತು ಪಡಿತರ ಚೀಟಿ ಕೂಡ ಮಾಡಿ ಕೊಡಲಿದ್ದಾರೆ ಅಧಿಕಾರಿಗಳು.

ಸುದ್ದಿ ಉದಯ ವಾರ ಪತ್ರಿಕೆ ಬೆಳ್ತಂಗಡಿಯ ಜನರ ಧ್ವನಿಯಾಗಿ ಹಲವಾರು ವಿಶೇಷ ವರದಿಗಳನ್ನು ಪ್ರಕಟಿಸುತ್ತಿದೆ. ಜನಧ್ವನಿ ಎಂಬ ಶಿರ್ಷಿಕೆಯಡಿಯಲ್ಲಿ ಸುದ್ದಿಗಳನ್ನು ಬಿತ್ತರಿಸುತ್ತಿದೆ. ಹಲವಾರು ವಿಶೇಷ ವರದಿಗಳು ಪ್ರಕಟಗೊಂಡ ಬೆನ್ನಲ್ಲೇ ಪರಿಹಾರ ಹಾದಿ ಕೂಡ ಸಿಕ್ಕಿದೆ. ಇನ್ನೂ ಡೀಕಮ್ಮ ಅಜ್ಜಿಯ ವ್ಯಥೆಗೆ ಅಧಿಕಾರಿಗಳು ಸ್ಪಂದನೆ ನೀಡುವ ಮೂಲಕ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಪಾತ್ರರಾಗಿದ್ದಾರೆ. ಸುದ್ದಿ ಉದಯ ವಾರ ಪತ್ರಿಕೆಯ ವರದಿಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಜೊತೆಯಲ್ಲಿ ಅಳದಂಗಡಿ ಗ್ರಾಮ ಆಡಳಿತಾಧಿಕಾರಿ ವಿಜೇತ್.ಬಿ, ವೇಣೂರು ಆರ್.ಐ.ಕುಮಾರ್ ಸ್ವಾಮಿ, ಗ್ರಾಮ ಸಹಾಯಕಿ ಶಾರದಾ ,ಚಾಲಕ ಸಂತೋಷ್, ಸ್ಥಳೀಯ ನಿವಾಸಿ ಸಂತೋಷ್ ಜೊತೆಯಿದ್ದರು.

Related posts

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಸೋಣಂದೂರು ಶಾಲೆಗೆ ಲ್ಯಾಪ್‌ಟಾಪ್ ಕೊಡುಗೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya

ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಬೆಳ್ತಂಗಡಿಗೆ ಆಗಮಿಸಿದ ವಿ.ಸೋಮಣ್ಣರವರಿಗೆ ಬಿಜೆಪಿಯಿಂದ ಅದ್ದೂರಿ ಸ್ವಾಗತ:

Suddi Udaya

ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯಸ್ಮರಣೆ ಆಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!