July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ವಿದ್ಯಾ ಭಾರತಿ ಉಚ್ಚ ಶಿಕ್ಷಾ ಸಂಸ್ಥಾನ ಕರ್ನಾಟಕ ಮತ್ತು ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಭಾರತ್ ಬೋಧ್ ಮಾಲಾ ಉಪನ್ಯಾಸ ಮಾಲಿಕೆಯಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ವಿದುಷಿ ಮಂಜುಳಾ ಸುಬ್ರಹ್ಮಣ್ಯರವರು ಸಂಗೀತ ಮತ್ತು ನೃತ್ಯ, ಪರಿಸರದಿಂದ ಸಿಕ್ಕಿರುವಂತಹದು. ಪ್ರತಿಯೊಂದು ಧ್ವನಿಯೂ ಕಲಾವಿದನಿಗೆ ಸಂಗೀತದಂತೆ ಕಾಣುತ್ತದೆ. ಮರಗಳು ಮತ್ತು ನದಿಗಳ ಚಲನೆ ಕಲಾವಿದನಿಗೆ ನೃತ್ಯವಾಗಿ ಕಾಣುವುದರೊಂದಿಗೆ ಏಕಾಗ್ರತೆ ಲಭಿಸುತ್ತದೆ ಹಾಗು ನವರಸಗಳು, ನೃತ್ಯ, ಸಂಗೀತ ಮತ್ತು ಸಂಭಾಷಣೆಯ ಏರಿಳಿತದ ಕುರಿತು ಪ್ರಾಯೋಗಿಕವಾಗಿ ತರಬೇತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂತೋಷ ಸಲ್ಡಾನ ರವರು ವಹಿಸಿ ಭಾಷೆ ಕಲಿಕೆಯಿಂದಾಗಿ ನಟನೆ ಮರೆಯುತ್ತೇವೆ. ಸಂಗೀತ, ನೃತ್ಯ, ಶಿಕ್ಷಕರ ಬೋಧನೆಗೆ ಸಹಾಯಕ. ಶಿಕ್ಷಕರಿಗೆ ನವರಸಗಳ ಬಗ್ಗೆ ಅರಿವಿದ್ದಾಗ ಉತ್ತಮ ಗುರುವಾಗಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ಕಾರ್ಯಕ್ರಮದಲ್ಲಿ ವಿದುಷಿ ಮಂಜುಳ ಸುಬ್ರಹ್ಮಣ್ಯರ ಶಿಷ್ಯೆಯಾದ ಕುಮಾರಿ ಅವನಿ ಬೆಳ್ಳಾರೆ ಹಾಗೂ ಕಾಲೇಜಿನ ಉಪನ್ಯಾಸಕರು, ಬಿ.ಎಡ್. ಮತ್ತು ಡಿ.ಎಡ್. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರಥಮ ಬಿ.ಎಡ್. ಪ್ರಶಿಕ್ಷಣಾರ್ಥಿಗಳಾದ ಪೂಜಶ್ರೀ ಅತಿಥಿ ಪರಿಚಯ ಮಾಡಿ, ಶ್ವೇತಾ ಎಂ ಎಸ್ ಸ್ವಾಗತಿಸಿ, ಹರ್ಷಿತಾ ವಂದಿಸಿ, ಶ್ರವಣ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ರೈತರು ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ: 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು: ಪೃಥ್ವಿ ಸಾನಿಕಂ ಪತ್ರಿಕಾಗೋಷ್ಠಿ

Suddi Udaya

ಬಾರ್ಯ: ಮುರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1.50 ಲಕ್ಷ ಡಿಡಿ ವಿತರಣೆ

Suddi Udaya

ಬಸ್ಸಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಶ್ರೀರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ, ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ

Suddi Udaya
error: Content is protected !!