September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಉಜಿರೆಯಲ್ಲಿ ವೈದ್ಯ ಹಾಗೂ ಆಧ್ಯಾತ್ಮಿಕ ಮಾರ್ಗದರ್ಶಕರಾಗಿರುವ ಡಾ.ಪ್ರದೀಪ್ ನಾವರ ಅವರು ಜೂ.27 ರಂದು 2025-26ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳನ್ನು ಉದ್ಘಾಟಿಸಿದರು.

ಬಳಿಕ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, “ನಾವು ಪಡೆದಿರುವ ಜ್ಞಾನ ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಹಾಗೂ ಎಲ್ಲರೊಳಗೆ ಒಂದಾಗಲು ಸಂಘಗಳು ಪ್ರೇರಕ” ಎಂದು ಹೇಳಿದರು.

ಶಾಲೆಯ ವಿವಿಧ ಸಂಘಗಳಾದ ಸಾಂಸ್ಕೃತಿಕ ಸಂಘ, ಭಿತ್ತಿ ಪತ್ರಿಕೆ ಸಂಘ, ಕಲಾ ಸಂಘ, ಹವ್ಯಾಸ ಸಂಘ, ಕ್ರೀಡಾ ಸಂಘ, ಇಂಟೆರಾಕ್ಟ್ ಸಂಘ, ಪರಿಸರ ಸಂಘ, ಕನ್ನಡ ಸಂಘ, ವಿಜ್ಞಾನ ಸಂಘ, ಸಾಹಿತ್ಯ ಸಂಘ, ಗಣಿತ ಸಂಘ ಇವುಗಳ ಉದ್ಘಾಟನೆ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿಗಳಾದ ಅಕ್ಷಮ್ ಜೈನ್ ಹಾಗೂ ಅವನಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿ ಸಾವನ್ ವಂದಿಸಿದರು.

Related posts

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

Suddi Udaya
error: Content is protected !!