July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.30: ಅಳದಂಗಡಿ ಸ.ಪ.ಪೂ ಕಾಲೇಜಿನ ಉಪನ್ಯಾಸಕ ಹರೀಶ್ ರೈ ವಯೋನಿವೃತ್ತಿ

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅರ್ಥಶಾಸ್ತç ಉಪನ್ಯಾಸಕರಾಗಿರುವ ಹರೀಶ್ ರೈ ಅವರು ಜೂ.೩೦ ರಂದು ವಯೋನಿವೃತ್ತಿ ಹೊಂದುತ್ತಿದ್ದಾರೆ.


ಭಾರತೀಯ ಭೂಸೇನೆಯಲ್ಲಿ ಪ್ರಾಧ್ಯಾಪಕರಾಗಿ ಸೇವೆಗೆ ಸೇರಿದ ಇವರು ಅಸ್ಸಾಂ, ಜಬಲ್ಪುರ್, ಪಠಾಣ್ ಕೋಟ್, ಪಚ್ಮುರಿ, ಬೆಂಗಳೂರು ಮೊದಲಾದ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದು ರಕ್ಷಕ್ ಮತ್ತು ಕಾರ್ಗಿಲ್ ಯುದ್ಧವು ಸೇರಿ ಹಲವು ಸೇನಾ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ್ದು ೨೦೦೯ರಲ್ಲಿ ನಿವೃತ್ತಿ ಹೊಂದಿದ್ದಾರೆ. ಬಳಿಕ ಉಜಿರೆಯ ಎಸ್‌ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಾಗಿ, ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾಗಿ, 2013 ರಿಂದ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಲಿಂಗಸಗೂರು ಮತ್ತು ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 12 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದಾರೆ. ರೋಟರಿ, ಎಂಆರ್‌ಪಿಎಲ್ ಮತ್ತು ದಾನಿಗಳ ಸಹಕಾರದಿಂದ ಸಂಸ್ಥೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಇವರು ಪ್ರಯತ್ನಿಸಿದ್ದಾರೆ. ಉಜಿರೆ ನಿವಾಸಿಯಾಗಿರುವ ಇವರು ಪತ್ನಿ ಭಾರತಿ, ಹಿರಿಯ ಪುತ್ರಿ ಡಾ. ಅಭಿಜ್ಞ ರೈ, ಅಳಿಯ ಡಾ. ನವೀನ್ ಪಕ್ಕಳ, ಕಿರಿಯ ಪುತ್ರಿ ಶುಭಜ್ಞ ರೈ ಇಂಜಿನಿಯರ್ ಆಗಿದ್ದಾರೆ.

Related posts

ಕುವೆಟ್ಟು ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿ ಸ್ಥಗಿತ

Suddi Udaya

ದೈವದೇವರ ಅವಹೇಳನ ಆರೋಪ: ಕಲಾವಿದರ ವಿರುದ್ಧ ದೂರು

Suddi Udaya

ಭಾರಿ ಮಳೆಗೆ ಸುಲ್ಕೇರಿ ಅಣ್ಣು ಪೂಜಾರಿ ರವರ ಮನೆ ಸಂಪೂರ್ಣ ಹಾನಿ: ಸ್ಥಳಕ್ಕೆ ರಕ್ಷಿತ್ ಶಿವಾರಂ ಭೇಟಿ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿಗೆ ಶೇ.85.2 ಫಲಿತಾಂಶ

Suddi Udaya

ಸೌಜನ್ಯಾ ಕೊಲೆ ಪ್ರಕರಣ: ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

Suddi Udaya

ಉಜಿರೆ: ಇಂಟರಾಕ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!