25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ:ಪೃಥ್ವಿ ಜ್ಯುವೆಲ್ಸ್ ನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ,ಪೋಟೋ ವಿಜೇತರಿಗೆ ಪ್ರಶಸ್ತಿ

ಬೆಳ್ತಂಗಡಿ: ಸಾಧಕ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರೋತ್ಸಾಹಿಸಿ ಅವರ ಮನೋ ಬಲವನ್ನು ಗಟ್ಟಿಗೊಳಿಸುವ ಕೆಲಸವನ್ನು ಪೃಥ್ವಿ ಜ್ಯುವೆಲ್ಸ್ ಮಾಡುತ್ತಿದೆ. ಕಳೆದ ಹಲವು ವರ್ಷಗಳಿಂದ ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಉತ್ತಮ ವೇದಿಕೆಯನ್ನು ಕಲ್ಪಿಸುವ ಮೂಲಕ ಸಮಾಜಕ್ಕೆ ಈ ಸಂಸ್ಥೆ ಸ್ಪೂರ್ತಿಯಾಗಿದೆ ರಂದು ವೇಣೂರು ಪ್ರೌಢ ಶಾಲಾ ವಿಜ್ಞಾನ ಶಿಕ್ಷಕಿ ಸಂಧ್ಯಾ ಸುಕುಮಾರ್ ಜೈನ್ ಹೇಳಿದರು.

ಅವರು ಪೃಥ್ವಿ ಜ್ಯುವೆಲ್ಸ್ ನಲ್ಲಿ ನಡೆದ ಎಸ್.ಎಸ್.ಎಲ್.ಸಿಯಲ್ಲಿ ಸಾಧನೆಗೈದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಸಮಾರಂಭದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ‌ ಪ್ರಜೆಯಾಗಿ ಬಾಳಬೇಕು ಎಂದರು.

ಸುದ್ದಿ ಉದಯ ವಾರಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ ಕೋಟ್ಯಾನ್ ಮಾತನಾಡಿ ಕಳೆದೆಳು ವರ್ಷಗಳಿಂದ ಪೃಥ್ವಿ ಜುವೆಲ್ಸ್ ಸಂಸ್ಥೆಯು ವಿಶಿಷ್ಟ ಕಾರ್ಯಕ್ರಮಗಳ ಆಯೋಜನೆ ಮೂಲಕ ಪ್ರತಿ ಮನೆ ಮನೆಗೆ ತಲುಪಿದೆ.ಭಾರತೀಯ ವಿಚಾರಧಾರೆ ಮತ್ತು ಭಾವೈಕ್ಯತೆಯ ಶಿಕ್ಷಣ ಇಂದಿನ ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್ಸಿಯಲ್ಲಿ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಫಾದರ್ ಡೇ ಆಯೋಜಿಸಿದ ಪೋಟೋ ಸ್ಪರ್ದೇಯಲ್ಲಿ ವಿಜೇತರಾದ ಕವಿತೇಶ್ ಇವರನ್ನು ಗೌರವಿಸಲಾಯಿತು.

ಸಂಸ್ಥೆಯ ಮ್ಯಾನೇಜರ್ ಅಶೋಕ್ ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಸಿಬ್ಬಂದಿಗಳು ಸಹಕರಿಸಿದರು.ಮಧುಮಿತ್ರ ಬಂಟ್ವಾಳ ನಿರೂಪಿಸಿ ವಂದಿಸಿದರು.


ಸನ್ಮಾನ: ಕಾರ್ಯಕ್ರಮದಲ್ಲಿ ಎಸ್.ಎಸ್‌‌.ಎಲ್.ಸಿ ಸಾಧಕರಾದ ಶರುಣ್ ಡಿಸೋಜ,ತಾನ್ವಿ ಭಟ್ ಎಂ,ಮನಶ್ರೀ,ಸುಪ್ರಿಯ ಎಸ್,ಅರ್ಮಾನ್ ರಿಯಾಜ್,ಅನ್ನಿತಾ ಜೋಸೆಫ್ ಇವರನ್ನು ಸನ್ಮಾನಿಸಲಾಯಿತು.ಮಕ್ಕಳ ಪೋಷಕರು ಉಪಸ್ಥಿತರಿದ್ದರು. ‌

Related posts

ಆಳ್ವಾಸ್ ಪದವಿ ಕಾಲೇಜಿನಲ್ಲಿ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ಬಳ್ಳಮಂಜ ಬ್ರಹ್ಮಕಲಶ: ಈಶ್ವರ ದೇವರ ಲಿಂಗ ಪುನ:ಪ್ರತಿಷ್ಠೆ ಅಷ್ಟಬಂಧ ಪ್ರತಿಷ್ಠೆ-ಗರುಡ ಪ್ರದಕ್ಷಿಣೆ

Suddi Udaya

ಜ.13: ಮೊಗ್ರು ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!