22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

ಬೆಳ್ತಂಗಡಿ : ದೂರ ದೃಷ್ಟಿಯ ಆಡಳಿತಗಾರರಾಗಿ ಸಮೃದ್ಧವಾದ ಬೆಂಗಳೂರು ನಗರವನ್ನು ನಿರ್ಮಿಸಲು ಶ್ರಮಿಸಿದ ಕೆಂಪೇಗೌಡರು ಈ ನಾಡು ಕಂಡ ಮಹಾನ್ ವ್ಯಕ್ತಿಯಾಗಿದ್ದಾರೆ ಎಂದು ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಆನಂದ ಗೌಡ ಹೇಳಿದರು.


ಅವರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ.ರಿ ಬೆಳ್ತಂಗಡಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಜರಗಿದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ನೀಡುತ್ತಾ, ಕೆಂಪೇಗೌಡರು ತನ್ನ ಆಡಳಿತ ಕೌಶಲ್ಯದಿಂದ ಬೆಂಗಳೂರನ್ನು ವ್ಯಾಪಾರ, ವಾಣಿಜ್ಯ, ಕೃಷಿ ಚಟುವಟಿಕೆಗಳ ಕೇಂದ್ರವನ್ನಾಗಿ ಮಾಡಿದ್ದಲ್ಲದೆ ಜನರ ಬಳಕೆಗೆ ನೀರಾವರಿಗಾಗಿ ಹಲವಾರು ಕೆರೆಗಳನ್ನು ನಿರ್ಮಿಸಿದ್ದರು. ಪ್ರತಿಯೊಂದು ವೃತ್ತಿ ಬಾಂಧವರಿಗೂ ಇಲ್ಲಿ ಮಹತ್ವವನ್ನು ನೀಡಿದ್ದು ಪ್ರಜಾ ಹಿತವನ್ನು ಕಾಪಾಡಿದ್ದರು. ಇಂದು ಶಿಕ್ಷಣ, ಉದ್ಯಮ ಕ್ಷೇತ್ರಗಳಲ್ಲಿ ಅತ್ಯುನ್ನತ ಸಾಧನೆಯನ್ನು ಮಾಡುತ್ತಿರುವ ಬೆಂಗಳೂರಿನಡೆಗೆ ಇಡೀ ಜಗತ್ತೇ ಕಣ್ಣು ಹಾಯಿಸುವಂತಾಗಿದೆ. ಇದೆಲ್ಲರ ನಿರ್ಮಾತೃ ಕೆಂಪೇಗೌಡರನ್ನು ಸ್ಮರಿಸುವುದು ಆದ್ಯ ಕರ್ತವ್ಯವಾಗಿದೆ ಎಂದರು.


ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾದ ಪಿ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾದ ಜಯಾನಂದ ಗೌಡ.ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷ ನಾರಾಯಣಗೌಡ ದೇವಸ್ಯ, ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ ಅನಾರ್, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ಮಾಜಿ ಕಾರ್ಯದರ್ಶಿ ದುಗ್ಗಪ್ಪ ಗೌಡ, ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ವಾಣಿ ಆಂಗ್ಲ ಮಾಧ್ಯಮ ಪ್ರಾರ್ಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಸುಹಾಸಿನಿ ಉಪಸಿತರಿದ್ದರು.


ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಧನ್ಯವಾದವಿತ್ತರು. ಉಪನ್ಯಾಸಕ ಬೆಳಿಯಪ್ಪ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ನೇಮಕ

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಲೋಕಾರ್ಪಣೆ

Suddi Udaya
error: Content is protected !!