July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘ, ಎನ್ ಎಸ್ ಎಸ್, ರೋವರ್ಸ್ ಮತ್ತು ರೇಂಜರ್ಸ್ ಹಾಗೂ ಇತರ ಸಂಘಗಳ ಉದ್ಘಾಟನೆಯು ಜೂ.27 ರಂದು ನಡೆಯಿತು.


ಉದ್ಘಾಟಕರಾಗಿ ಆಗಮಿಸಿದ ಸರಕಾರಿ ಪ್ರೌಢ ಶಾಲೆ ಕಕ್ಕಿಂಜೆಯ ಮುಖ್ಯೋಪಾಧ್ಯಾಯರಾದ ಶಂಭು ಶಂಕರ ಅವರು, ‘ದೇಶದ ಬೆಳವಣಿಗೆಗೆ ವಿದ್ಯಾವಂತ ಯುವಕರ ಪಾಲ್ಗೊಳ್ಳುವಿಕೆ ನಿರ್ಣಾಯಕವಾದುದು, ಸೇವಾಮನೋಭಾವನೆ, ನಾಯಕತ್ವ ಹಾಗೂ ಜೀವನ ಕೌಶಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ಬೆಳೆಸಿಕೊಳ್ಳಬೇಕು’ ಎಂದರು. ವಿದ್ಯಾರ್ಥಿ ನಾಯಕರಿಗೆ ಕಾಲೇಜಿನ ಪ್ರಾಂಶುಪಾಲೆ ಗೀತಾ ಪ್ರಮಾಣವಚನ ಬೋಧಿಸಿ, ಶುಭ ಹಾರೈಸಿದರು.

ವಿದ್ಯಾರ್ಥಿ ಸಂಘದ ಸಲಹೆಗಾರರಾದ ಪುರುಷೋತ್ತಮ ಶೆಟ್ಟಿ ಪ್ರಸ್ತಾವಿಸಿ, ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ವಹಿಸಿದ್ದರು. ವಿದ್ಯಾರ್ಥಿ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿ ಪ್ರತಿನಿಧಿಗಳ ಪರವಾಗಿ ಮೋಕ್ಷಿತಾ ತಮ್ಮ ಮುಂದಿನ ಯೋಜನೆಗಳ ಬಗ್ಗೆ ತಿಳಿಸಿದರು. ಉಪನ್ಯಾಸಕಿ ನಮಿತಾ ಕೆ. ಆರ್ ನಿರೂಪಿಸಿದರು. ಉಪನ್ಯಾಸಕ ಸುಭಾಷ್ ಚಂದ್ರ ಜೈನ್ ಪುಷ್ಪ ನೀಡಿ ಗೌರವಿಸಿದರು. ಉಪನ್ಯಾಸಕ ಪದ್ಮನಾಭ ಬಿ.ಕೆ. ವಂದಿಸಿದರು. ಎಲ್ಲಾ ಉಪನ್ಯಾಸಕರು ಸಹಕರಿಸಿದರು.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya

ಮುಹಮ್ಮದ್ ಹಫೀಝ್ 100ನೇ ದಿನದ ಸ್ಮರಣಾರ್ಥ ಎಸ್.ಬಿ.ಎಸ್ ಕುಂಟಿನಿ ಮದರಸ ವತಿಯಿಂದ ರಕ್ತದಾನ ಶಿಬಿರ

Suddi Udaya

ಕೃಷಿಕರ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕು : ಮೋಹನ್ ಗೌಡ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ 25 ವಿದ್ಯಾರ್ಥಿಗಳು ಉತ್ತೀರ್ಣ

Suddi Udaya
error: Content is protected !!