22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ 175 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ವೆನ್ಲಾಕ್ ರಕ್ಷಾ ಸಮಿತಿ

ಧರ್ಮಸ್ಥಳ: ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಗೆ 175 ನೇ ವರ್ಷ ತುಂಬಿದ ಪ್ರಯುಕ್ತ ಸಂಭ್ರಮಾಚರಣೆಯು ಬರುವ ಸೆಪ್ಟೆಂಬರ್ 14 ರಂದು ವೆನ್ಲಾಕ್, ಲೇಡಿಗೋಷನ್, ಕೆ. ಎಮ್.ಸಿ. ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷ ಯು.ಟಿ ಖಾದರ್, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಸೇರಿದಂತೆ ಹಲವಾರು ಸಚಿವರು, ಸಂಸದರು, ರಾಜ್ಯಸಭಾ ಸದಸ್ಯರು, ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ನಿಗಮ ಮಂಡಳಿಯ ಅಧ್ಯಕ್ಷರುಗಳು, ಜಿಲ್ಲೆಯ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಮುಂದಿನ ಭಾಗವಾಗಿ ಜೂ. 26ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಅಧೀಕ್ಷಕರಾದ ಡಾ.ಶಿವಪ್ರಕಾಶ್ ಡಿ.ಎಸ್. ನೇತೃತ್ವದಲ್ಲಿ ಬೇಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ಪಲಿಯೇಟಿವ್ ಮೆಡಿಕಲ್ ಆಫೀಸರ್ ಡಾ. ಅನ್ನಯ್ಯ ಕುಲಾಲ್, ಪಿಸಿಷಿಯನ್ ಡಾ.ವಿಜಯ ಕುಮಾರ್, ರಕ್ಷಾ ಸಮಿತಿಯ ಪದ್ಮನಾಭ ಅಮೀನ್, ಅಬ್ದುಲ್ ಕರೀಮ್ ಗೇರುಕಟ್ಟೆ, ಶಶಿದರ್ ಬಜಾಲ್, ಅಬ್ದುಲ್ ಸಲೀಮ್, ಶ್ರೀಮತಿ ಪ್ರಮೀಳಾ, ದಾಮೋದರ್ ಪುತ್ತೂರು, ಜಯರಾಮ ಬೆಳ್ತಂಗಡಿ, ವಕ್ಫ್ ಸಲಹಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಸಹಾಯಕ ಆಡಳಿತಾಧಿಕಾರಿಗಳಾದ ಶ್ರೀಮತಿ ವಿದ್ಯಾ ಬಿ,ಕಛೇರಿ ಅಧೀಕ್ಷಕರಾದ ಅಶೋಕ್ ರಾಜನಾಲ್, ದ್ವಿತೀಯ ದರ್ಜೆ ಸಹಾಯಕ ಎ.ಕ್ಲೆರೆನ್ಸ್ ರಾಜ್,ಸಿಬ್ಬಂದಿ ಸಿದ್ದಪ್ಪ ಹಾಗೂ ಉಸ್ಮಾನ್ ಕೆ.ಪಿ.ಕಾಜೂರು ಹಾಜರಿದ್ದರು.

Related posts

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ಅಭಾಸಾಪ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಕಳಿಯ ಗ್ರಾ.ಪಂ. ಮಟ್ಟದ ವೈಷ್ಣವಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya
error: Content is protected !!