July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಭಾರತೀಯ ಜೈನ್ ಮಿಲನ್ ವತಿಯಿಂದ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್‌ರವರಿಗೆ ಅಭಿನಂದನೆ

ವೇಣೂರು: ಇಲ್ಲಿಯ ಭಾರತೀಯ ಜೈನ್ ಮಿಲನ್ ವೇಣೂರು ಘಟದ ಸಭೆಯು ವೇಣೂರು ಯಾತ್ರಿ ನಿವಾಸದಲ್ಲಿ ಜರುಗಿತು.

ಭಾರತೀಯ ಜೈನ್ ಮಿಲನ್ ಅಧ್ಯಕ್ಷ ಸುಕುಮಾರ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಕ್ಸೆಲ್ ಪ.ಪೂ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಭಾರತೀಯ ಜೈನ್ ಮಿಲನ್ ವಲಯ ೮ರ ನಿರ್ದೇಶಕ ಪ್ರಮೋದ್ ಕುಮಾರ್ ಬಿ., ಜೈನ್ ಮಿಲನ್ ಕಾರ್ಯದರ್ಶಿ ಬಿ. ನಿರ್ಮಲ್ ಕುಮಾರ್ ಬೊಲ್ಜಾಲ್ ಉಪಸ್ಥಿತರಿದ್ದರು. ಈ ಸಂದರ್ಭ ಶಿಕ್ಷಣ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿ ಅರ್ಹವಾಗಿ ಪ್ರತಿಷ್ಠಿತ ವಿಜಯರತ್ನ ಪ್ರಶÀಸ್ತಿಯಿಂದ ಪುರಸ್ಕೃತಗೊಂಡಿರುವ ಗುರುವಾಯನಕೆರೆ ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌ರವರನ್ನು ಅಭಿನಂದಿಸಿ ಗೌರವಿಸಲಾಯಿತು.


ಈ ಸಂದರ್ಭ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ೬೨೦ ಅಂಕಗಳನ್ನು ಪಡೆದು ರಾಜ್ಯಕ್ಕೆ ೬ನೇ ಸ್ಥಾನ ಪಡೆದ ಸರ್ವಾರ್ಥ್ ಎಸ್. ಜೈನ್ ಸೇರಿದಂತೆ ೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.೯೦ಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜರುಗಿತು.
ಈ ಸಂದರ್ಭ ಅರಿಹಂತ ವಿಷನ್ ಇನ್ ಟ್ರಾಕ್ಸ್ನ ವಿ.ಎಸ್. ಜಯರಾಜ್, ನಮನ ಕ್ಲಿನಿಕ್‌ನ ವೈದ್ಯರಾದ ಡಾ| ಶಾಂತಿಪ್ರಸಾದ್, ಪಾರ್ಶ್ವನಾಥ್ ಪ್ರಿಂರ‍್ಸ್ನ ಸುದತ್ ಜೈನ್, ಅರುಣ್ ಕುಮಾರ್ ಐದಲ್ಕೆ, ಬಿ.ವಿ. ಸುನೀಲ್ ಕುಮಾರ್ ಮುದ್ದಾಡಿ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.


Related posts

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಿಗೆ ಕಿರುಕುಳ ಬೇಡ ಹೈಕೋರ್ಟ್

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಕೇಂದ್ರ ಸರ್ಕಾರದ ದಮನಕಾರಿ ಕ್ರಮ ಪ್ರಜಾಪ್ರಭುತ್ವಕ್ಕೆ ಕಳಂಕ: ರಕ್ಷಿತ್ ಶಿವರಾಂ

Suddi Udaya
error: Content is protected !!