22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

ಉಜಿರೆ: ಅನುಗ್ರಹ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜೂ.27 ರಂದು ಅ ಅನುಗ್ರಹ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ವಂ ಫಾ ಅಬೆಲ್ ಲೋಬೊ, ಮುಖ್ಯ ಅತಿಥಿಯಾಗಿ ಹಾಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಮರ್ಲಿನ್ ಡಿಸೋಜಾಇವರು ಉಪಸ್ಥಿತರಿದ್ದರು


ಹೊಸದಾಗಿ ಆಯ್ಕೆಯಾದ ಶಾಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮಂತ್ರಿಮಂಡಲದ ನೂತನ ಸದಸ್ಯರಿಗೆ ಶಾಲಾ ಪ್ರಾಂಶುಪಾಲರಾದವಂ ಫಾ ವಿಜಯ್ ಲೋಬೋ ಇವರ ಪ್ರಮಾಣ ವಚನವನ್ನು ಬೋಧಿಸಿದರು.
ಪ್ರೌಢಶಾಲಾ ವಿದ್ಯಾರ್ಥಿ ನಾಯಕಿಯಾಗಿ ಕುಮಾರಿ ಮಿಶೆಲ್ ಪಿಂಟೋ ಉಪನಾಯಕನಾಗಿ ಶೌರ್ಯ ಕಾಮತ್ ಪ್ರಾಥಮಿಕ ಶಾಲಾ ವಿದ್ಯಾರ್ಥಿಯ ನಾಯಕಿಯಾಗಿ ಕುಮಾರಿ ಸಿಂಚನ ಉಪನಾಯಕನಾಗಿ ಸುಹಾನ್ ಮೊಂತೆರೊ ಹಾಗೂ ಇವರ ಜೊತೆಯಲ್ಲಿ ಮಂತ್ರಿಮಂಡಲದ ಇತರ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.


ಯುವ ನಾಯಕತ್ವದ ಭದ್ರತೆ ಕರ್ತವ್ಯ, ಜವಾಬ್ದಾರಿ ಹಾಗೂ ಅದರ ಅಗತ್ಯದ ಬಗ್ಗೆ ಮತ್ತು ಶಾಂತಿ ಸೌಹಾರ್ದತೆಯಿಂದ ರಾಷ್ಟ್ರಾಭಿಮಾನವನ್ನು ಮೈಗೂಡಿಸಿ ಇಂದಿನ ಯುವಪೀಳಿಗೆ ಬೆಳೆಯಬೇಕಾಗಿದೆ ಎಂದು ಸಂಚಾಲಕರಾದ ವಂ ಫಾ ಅಬೆಲ್ ಲೋಬೊ, ಮುಖ್ಯ ಅತಿಥಿಯಾದ ಮರ್ಲಿನ್ ಡಿಸೋಜಾ ಎಂದು ತಿಳಿಸಿದರು. ಪ್ರಾಂಶುಪಾಲರಾದ ವಂ ಫಾ ವಿಜಯ್ ಲೋಬೊ ಇವರು ಮಂತ್ರಿಮಂಡಲದ ಸದಸ್ಯರಿಗೆ ತಮ್ಮ ಕರ್ತವ್ಯದ ಬಗ್ಗೆ ತಿಳಿಸಿದರು. ಪ್ರಮಾಣವಚನ ಸ್ವೀಕರಿಸಿದ ಮಂತ್ರಿಮಂಡಲದ ಸರ್ವಸದಸ್ಯರಿಗೆ ಶುಭವನ್ನು ಹಾರೈಸಿದರು. ಸಹಶಿಕ್ಷಕಿ ವಿನಯಲತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಗಣೇಶೋತ್ಸವ ಜಲಸ್ಥಂಭನ ಶೋಭಾಯಾತ್ರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಎಂ ಎಲ್ ಸಿ ಕಿಶೋರ್ ಕುಮಾರ್ ಬೊಟ್ಯಾಡಿ ಭಾಗಿ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಕಲ್ಬೆಟ್ಟು ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

Suddi Udaya
error: Content is protected !!