September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

ಅಳದಂಗಡಿ: “ ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಎಂಬ ಶೀರ್ಷಿಕೆ ಅಡಿಯಲ್ಲಿ ಬೆಳ್ತಂಗಡಿ ಸುದ್ದಿ ಉದಯ ವಾರ ಪತ್ರಿಕೆ ಜೂ.26 ರಂದು ವರದಿ ಪ್ರಕಟಿಸಿತ್ತು. ಇದಾದ ಬಳಿಕ ಒಂದಲ್ಲಾ ಒಂದು ಬೆಳವಣಿಗೆ ಆಗುತ್ತಿದ್ದು ಅಜ್ಜಿಯ ವ್ಯಥೆಗೆ ಮುಕ್ತಿಯ ಹಾದಿಗಲು ಕಾಣುತ್ತಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅವರ ಸೂಚನೆ ಮೇರೆಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಅಧಿಕಾರಿಗಳು ಜೂನ್ 27 ರಂದು ಸಂಜೆ ಡೀಕಮ್ಮ ಅಜ್ಜಿ ಮನೆಗೆ ಭೇಟಿ ನೀಡಿ ವಾಸ್ತವ್ಯ ದೃಢೀಕರಣ ಪತ್ರ ಹಾಗೂ ಆಹಾರ ಸಾಮಗ್ರಿಗಳ ಕಿಟ್ ನೀಡಿದರು. ಡೀಕಮ್ಮ ಅಜ್ಜಿಗೆ ವೋಟರ್ ಐಡಿ ಅರ್ಜಿ ಭರ್ತಿ ಮಾಡಿ ಚುನಾವಣಾ ಆಯೋಗದ ಸೈಟ್ ಗೆ ಅಪ್ ಲೋಡ್ ಮಾಡಲಾಗಿದೆ.ಇನ್ನೂ ಆಧಾರ್ ಮತ್ತು ಪಡಿತರ ಚೀಟಿ ಕೂಡ ಮಾಡಿ ಕೊಡಲಿದ್ದಾರೆ ಅಧಿಕಾರಿಗಳು.

ಸುದ್ದಿ ಉದಯ ವಾರ ಪತ್ರಿಕೆ ಬೆಳ್ತಂಗಡಿಯ ಜನರ ಧ್ವನಿಯಾಗಿ ಹಲವಾರು ವಿಶೇಷ ವರದಿಗಳನ್ನು ಪ್ರಕಟಿಸುತ್ತಿದೆ. ಜನಧ್ವನಿ ಎಂಬ ಶಿರ್ಷಿಕೆಯಡಿಯಲ್ಲಿ ಸುದ್ದಿಗಳನ್ನು ಬಿತ್ತರಿಸುತ್ತಿದೆ. ಹಲವಾರು ವಿಶೇಷ ವರದಿಗಳು ಪ್ರಕಟಗೊಂಡ ಬೆನ್ನಲ್ಲೇ ಪರಿಹಾರ ಹಾದಿ ಕೂಡ ಸಿಕ್ಕಿದೆ. ಇನ್ನೂ ಡೀಕಮ್ಮ ಅಜ್ಜಿಯ ವ್ಯಥೆಗೆ ಅಧಿಕಾರಿಗಳು ಸ್ಪಂದನೆ ನೀಡುವ ಮೂಲಕ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಪಾತ್ರರಾಗಿದ್ದಾರೆ. ಸುದ್ದಿ ಉದಯ ವಾರ ಪತ್ರಿಕೆಯ ವರದಿಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಜೊತೆಯಲ್ಲಿ ಅಳದಂಗಡಿ ಗ್ರಾಮ ಆಡಳಿತಾಧಿಕಾರಿ ವಿಜೇತ್.ಬಿ, ವೇಣೂರು ಆರ್.ಐ.ಕುಮಾರ್ ಸ್ವಾಮಿ, ಗ್ರಾಮ ಸಹಾಯಕಿ ಶಾರದಾ ,ಚಾಲಕ ಸಂತೋಷ್, ಸ್ಥಳೀಯ ನಿವಾಸಿ ಸಂತೋಷ್ ಜೊತೆಯಿದ್ದರು.

Related posts

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಜಯಶ್ರೀ ಕೆ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

Suddi Udaya

ಮಚ್ಚಿನ: ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Suddi Udaya
error: Content is protected !!