23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.30: ಅಳದಂಗಡಿ ಸ.ಪ.ಪೂ ಕಾಲೇಜಿನ ಉಪನ್ಯಾಸಕ ಹರೀಶ್ ರೈ ವಯೋನಿವೃತ್ತಿ

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅರ್ಥಶಾಸ್ತç ಉಪನ್ಯಾಸಕರಾಗಿರುವ ಹರೀಶ್ ರೈ ಅವರು ಜೂ.೩೦ ರಂದು ವಯೋನಿವೃತ್ತಿ ಹೊಂದುತ್ತಿದ್ದಾರೆ.


ಭಾರತೀಯ ಭೂಸೇನೆಯಲ್ಲಿ ಪ್ರಾಧ್ಯಾಪಕರಾಗಿ ಸೇವೆಗೆ ಸೇರಿದ ಇವರು ಅಸ್ಸಾಂ, ಜಬಲ್ಪುರ್, ಪಠಾಣ್ ಕೋಟ್, ಪಚ್ಮುರಿ, ಬೆಂಗಳೂರು ಮೊದಲಾದ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದು ರಕ್ಷಕ್ ಮತ್ತು ಕಾರ್ಗಿಲ್ ಯುದ್ಧವು ಸೇರಿ ಹಲವು ಸೇನಾ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ್ದು ೨೦೦೯ರಲ್ಲಿ ನಿವೃತ್ತಿ ಹೊಂದಿದ್ದಾರೆ. ಬಳಿಕ ಉಜಿರೆಯ ಎಸ್‌ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಾಗಿ, ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾಗಿ, 2013 ರಿಂದ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಲಿಂಗಸಗೂರು ಮತ್ತು ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 12 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದಾರೆ. ರೋಟರಿ, ಎಂಆರ್‌ಪಿಎಲ್ ಮತ್ತು ದಾನಿಗಳ ಸಹಕಾರದಿಂದ ಸಂಸ್ಥೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಇವರು ಪ್ರಯತ್ನಿಸಿದ್ದಾರೆ. ಉಜಿರೆ ನಿವಾಸಿಯಾಗಿರುವ ಇವರು ಪತ್ನಿ ಭಾರತಿ, ಹಿರಿಯ ಪುತ್ರಿ ಡಾ. ಅಭಿಜ್ಞ ರೈ, ಅಳಿಯ ಡಾ. ನವೀನ್ ಪಕ್ಕಳ, ಕಿರಿಯ ಪುತ್ರಿ ಶುಭಜ್ಞ ರೈ ಇಂಜಿನಿಯರ್ ಆಗಿದ್ದಾರೆ.

Related posts

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ಜಸ್ಟ್ ರೈಡ್ ನೋಡುತ್ತೇನೆಂದು ಬೈಕ್ ತೆಗೆದುಕೊಂಡಾತ ವಾಪಸ್ ಬರಲೇ ಇಲ್ಲ: ಇತ್ತೆ ಬರುವೆ ಎಂದು ಹೇಳಿ ಹೋದಾತನೂ ಇಲ್ಲ…ಬೈಕೂ ಇಲ್ಲ…:ಕಾಶಿಪಟ್ಣದ ಯುವಕ ಇಶಾನ್ ಪೂಜಾರಿಯರಿಂದ ಮೂಡಬಿದ್ರೆ ಪೋಲೀಸರಿಗೆ ದೂರು: ಬೈಕ್ ಸಹಿತ ಇಶಾನ್ ಶೆಟ್ಟಿ ಉಚ್ಚಿಲ್ ಪೊಲೀಸರ ವಶ

Suddi Udaya

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya
error: Content is protected !!