July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.30: ಅಳದಂಗಡಿ ಸ.ಪ.ಪೂ ಕಾಲೇಜಿನ ಉಪನ್ಯಾಸಕ ಹರೀಶ್ ರೈ ವಯೋನಿವೃತ್ತಿ

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅರ್ಥಶಾಸ್ತç ಉಪನ್ಯಾಸಕರಾಗಿರುವ ಹರೀಶ್ ರೈ ಅವರು ಜೂ.೩೦ ರಂದು ವಯೋನಿವೃತ್ತಿ ಹೊಂದುತ್ತಿದ್ದಾರೆ.


ಭಾರತೀಯ ಭೂಸೇನೆಯಲ್ಲಿ ಪ್ರಾಧ್ಯಾಪಕರಾಗಿ ಸೇವೆಗೆ ಸೇರಿದ ಇವರು ಅಸ್ಸಾಂ, ಜಬಲ್ಪುರ್, ಪಠಾಣ್ ಕೋಟ್, ಪಚ್ಮುರಿ, ಬೆಂಗಳೂರು ಮೊದಲಾದ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದು ರಕ್ಷಕ್ ಮತ್ತು ಕಾರ್ಗಿಲ್ ಯುದ್ಧವು ಸೇರಿ ಹಲವು ಸೇನಾ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ್ದು ೨೦೦೯ರಲ್ಲಿ ನಿವೃತ್ತಿ ಹೊಂದಿದ್ದಾರೆ. ಬಳಿಕ ಉಜಿರೆಯ ಎಸ್‌ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಾಗಿ, ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾಗಿ, 2013 ರಿಂದ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಲಿಂಗಸಗೂರು ಮತ್ತು ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 12 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದಾರೆ. ರೋಟರಿ, ಎಂಆರ್‌ಪಿಎಲ್ ಮತ್ತು ದಾನಿಗಳ ಸಹಕಾರದಿಂದ ಸಂಸ್ಥೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಇವರು ಪ್ರಯತ್ನಿಸಿದ್ದಾರೆ. ಉಜಿರೆ ನಿವಾಸಿಯಾಗಿರುವ ಇವರು ಪತ್ನಿ ಭಾರತಿ, ಹಿರಿಯ ಪುತ್ರಿ ಡಾ. ಅಭಿಜ್ಞ ರೈ, ಅಳಿಯ ಡಾ. ನವೀನ್ ಪಕ್ಕಳ, ಕಿರಿಯ ಪುತ್ರಿ ಶುಭಜ್ಞ ರೈ ಇಂಜಿನಿಯರ್ ಆಗಿದ್ದಾರೆ.

Related posts

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರಿಗೆ “ಡಾ.ಯಂ ವಿಶ್ವೇಶ್ವರಯ್ಯ ತಾಂತ್ರಿಕ ಪ್ರಶಸ್ತಿ”

Suddi Udaya
error: Content is protected !!