25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.30: ಅಳದಂಗಡಿ ಸ.ಪ.ಪೂ ಕಾಲೇಜಿನ ಉಪನ್ಯಾಸಕ ಹರೀಶ್ ರೈ ವಯೋನಿವೃತ್ತಿ

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅರ್ಥಶಾಸ್ತç ಉಪನ್ಯಾಸಕರಾಗಿರುವ ಹರೀಶ್ ರೈ ಅವರು ಜೂ.೩೦ ರಂದು ವಯೋನಿವೃತ್ತಿ ಹೊಂದುತ್ತಿದ್ದಾರೆ.


ಭಾರತೀಯ ಭೂಸೇನೆಯಲ್ಲಿ ಪ್ರಾಧ್ಯಾಪಕರಾಗಿ ಸೇವೆಗೆ ಸೇರಿದ ಇವರು ಅಸ್ಸಾಂ, ಜಬಲ್ಪುರ್, ಪಠಾಣ್ ಕೋಟ್, ಪಚ್ಮುರಿ, ಬೆಂಗಳೂರು ಮೊದಲಾದ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದು ರಕ್ಷಕ್ ಮತ್ತು ಕಾರ್ಗಿಲ್ ಯುದ್ಧವು ಸೇರಿ ಹಲವು ಸೇನಾ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ್ದು ೨೦೦೯ರಲ್ಲಿ ನಿವೃತ್ತಿ ಹೊಂದಿದ್ದಾರೆ. ಬಳಿಕ ಉಜಿರೆಯ ಎಸ್‌ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಾಗಿ, ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾಗಿ, 2013 ರಿಂದ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಲಿಂಗಸಗೂರು ಮತ್ತು ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 12 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದಾರೆ. ರೋಟರಿ, ಎಂಆರ್‌ಪಿಎಲ್ ಮತ್ತು ದಾನಿಗಳ ಸಹಕಾರದಿಂದ ಸಂಸ್ಥೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಇವರು ಪ್ರಯತ್ನಿಸಿದ್ದಾರೆ. ಉಜಿರೆ ನಿವಾಸಿಯಾಗಿರುವ ಇವರು ಪತ್ನಿ ಭಾರತಿ, ಹಿರಿಯ ಪುತ್ರಿ ಡಾ. ಅಭಿಜ್ಞ ರೈ, ಅಳಿಯ ಡಾ. ನವೀನ್ ಪಕ್ಕಳ, ಕಿರಿಯ ಪುತ್ರಿ ಶುಭಜ್ಞ ರೈ ಇಂಜಿನಿಯರ್ ಆಗಿದ್ದಾರೆ.

Related posts

ಕಡಿರುದ್ಯಾವರ ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಗುಡ್ಡ ಕುಸಿತದಂಥ ಪ್ರಕರಣ ಮತ್ತು ತಜ್ಞರ ಅಧ್ಯಯನ ವರದಿಗಳು ಭೂಕುಸಿತದ ಘೋರ ಪರಿಣಾಮಗಳನ್ನು ಜನರ ಮುಂದಿಟ್ಟಿದ್ದು ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿಸುವಂತೆ ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ರವರಿಂದ ಸಭಾಪತಿಗಳಿಗೆ ಮನವಿ

Suddi Udaya

ಬರೆಂಗಾಯದಲ್ಲಿ ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ನಾವೂರು : ಕೈಕಂಬ ಬಳಿ ರಸ್ತೆಗೆ ಬಿದ್ದ ಮರ: ನಾವೂರು ಗ್ರಾ.ಪಂ. ಹಾಗೂ ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya
error: Content is protected !!