July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ‘ಶೌರ್ಯ’ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಧರ್ಮಸ್ಥಳ,ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ ಬೆಳ್ತಂಗಡಿ, ಗುರುವಾಯನಕೆರೆ ವತಿಯಿಂದ ಕರ್ನಾಟಕ ರಾಜ್ಯದಲ್ಲಿರುವ ‘ಶೌರ್ಯ’ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂಸೇವಕರಿಗೆ ಹಮ್ಮಿಕೊಳ್ಳಲಾಗುವ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿಗೆ ಚಾಲನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿ ಧರ್ಮಸ್ಥಳದಲ್ಲಿ ಜೂ.27 ರಂದು ನೀಡಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಡೆಯವರು ಮಾತನಾಡಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಆಪತ್ತುಗಳು ಬಂದಾಗ ಎದುರಿಸಲು ನಮ್ಮ ಶೌರ್ಯ ತಂಡವು ಸೇವಾ ಮನೋಭಾವನೆಯಿಂದ ಸಜ್ಜಾಗಿದೆ. ಸಾಹಸ, ಧೈರ್ಯದಿಂದ ಶೌರ್ಯ ತಂಡ ಉತ್ತಮವಾಗಿ ಕೆಲಸವನ್ನು ಸಮಾಜದಲ್ಲಿ ಮಾಡುತ್ತಿದೆ ಎಂದರು.

ಟೀಮ್‌ ಕಮಾಂಡರ್, ಎನ್.ಡಿ.ಆರ್.ಎಫ್, ಗುಂಟೂರು, ಆಂಧ್ರಪ್ರದೇಶ ಇನ್‌ಸ್ಪೆಕ್ಟರ್ ಶಾಂತಿಲಾಲ್ ಜಟಿಯಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಘಟನೆಗಳು ಸಮಾಜಕ್ಕೆ ಶಕ್ತಿಯಾಗಿ ಕೆಲಸ ಮಾಡುತ್ತಿದೆ.ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಜನಸೇವೆ ನಡೆಯುತ್ತಿದೆ ಎಂದರು.

ಎಸ್.ಕೆ.ಡಿ.ಆರ್.ಡಿ.ಪಿ.ಬಿ.ಸಿ.ಟ್ರಸ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್.ಎಸ್ ಮಾತನಾಡಿ ಶೌರ್ಯ ವಿಪತ್ತು ಕಾರ್ಯಕ್ರಮಕ್ಕೆ 5 ವರ್ಷ ತುಂಬುತ್ತಿದೆ.ವಿಪತ್ತು ಸಂಭವಿಸಿದಾಗ ತರಭೇತಿ ತಂಡ ಘಟನಾ ಸ್ಥಳಕ್ಜೆ ಬರುವಾಗ ಸಮಯ ಹೆಚ್ಚಾಗುತ್ತದೆ. ಈ ಬಗ್ಗೆ ಸಮಾಜದ ಉನ್ನತಿಗೆ ಶಾಶ್ವತ ಪರಿಹಾರ ನೀಡುವ ಸದುದ್ದೇಶದಿಂದ ಖಾವಂದರು ಸಂಕಲ್ಪ ಮಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ರಚನೆ ಮಾಡಿದ್ದಾರೆ ಎಂದರು.

ಜಿಲ್ಲಾ ವಿಪತ್ತು ನಿರ್ವಹಣಾ ಕೋಶ, ದ.ಕ. ಜಿಲ್ಲೆ ವಿಪತ್ತು ನಿರ್ವಹಣಾ ಅಧಿಕಾರಿ ವಿಜಯ್ ಪೂಜಾರ್,ಎನ್‌ಡಿ.ಆರ್.ಎಫ್ ವಿನೋಧ್ ಆರ್ಯ,ಯೋಜನಾಧಿಕಾರಿಗಳಾದ ಯಶೋಧರ ಕೆ,ಅಶೋಕ ಬಿ ಉಪಸ್ಥಿತರಿದ್ದರು.

ವಿಪತ್ತು ಸಾಧಕರಿಗೆ ಪ್ರಶಸ್ತಿಯ ಗೌರವ: ಶೌರ್ಯ ವಿಪತ್ತು ಸಾಧಕ ಪ್ರಶಸ್ತಿಯನ್ನು ರವೀಂದ್ರ ಉಜಿರೆ, ಅವಿನಾಶ್ , ದಿನೇಶ್ ಶೆಟ್ಟಿ ನಾರಾವಿ, ವಿಶ್ವನಾಥ್ ತೆಂಕಕಾರಂದೂರು, ಸಾಧಕ ಸಂಯೋಜಕಿ ಪ್ರಶಸ್ತಿಯನ್ನು ಕು.ವಸಂತಿ, ಸವಿತಾ ಪಿರೇರಾ ಪಡೆದರು. ಸಾಧಕ ಘಟಕ ಪ್ರಶಸ್ತಿಯನ್ನು ಶಿಶಿಲ- ಅರಸಿನಮಕ್ಕಿ, ಮಡಂತ್ಯಾರು ಘಟಕ ಪಡೆಯಿತು.

ಪ್ರಾದೇಶಿಕ ನಿರ್ದೇಶಕರು ವಿವೇಕ್ ವಿ. ಪ್ಯಾಸ್ ಸ್ವಾಗತಿಸಿದರು.ಬೆಳ್ತಂಗಡಿ ಮತ್ತು ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಸ್ವಯಂಸೇವಕರು ಸಹಕರಿಸಿದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಗೆಜ್ಜೆಗಿರಿ ಮೇಳದ “ಪ್ರಚಂಡ ಮಹಿಷಾಸುರ” ಪ್ರಸಂಗ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಡುಗಡೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.92.89 ಕೋಟಿ ವಾರ್ಷಿಕ ವ್ಯವಹಾರ, ರೂ.43 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya

ಸೋಣಂದೂರು: ಮೊದಲೆ–ಸಬರಬೈಲು–ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹ

Suddi Udaya
error: Content is protected !!