September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ : ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ , ಒಕ್ಕಲಿಗ ಗೌಡರ ಯುವ ಸಂಘ ಒಕ್ಕಲಿಗ ಗೌಡರ ಮಹಿಳಾ ಸಂಘ , ಒಕ್ಕಲಿಗ ಗೌಡರ ಮಹಿಳಾ ಯುವ ಸಂಘ, ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.) ಉಜಿರೆ ಇವರ ಸಹಯೋಗದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಪ್ರಸನ್ನ ಶಿಕ್ಷಣ ಸಮೂಹ ಸಂಸ್ಥೆಗಳು ಲಾಯಿಲ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಮತ್ತು ಊರ ನಾಗರಿಕರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಜೂ. 27 ರಂದು ಮಂಜುನಾಥ ಸ್ವಾಮಿ ಕಲಾಮಂದಿರದ ಬಳಿ ಇರುವ ಬಯಲು ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಲಾಯಿಲ ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಕೆ. ಗಂಗಾಧರ ಗೌಡ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಒಕ್ಕಲಿಗ ಗೌಡರ ಸಂಘ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು , ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ , ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಯಂಜ , ಬೆಳ್ತಂಗಡಿ ವಕೀಲರ ಸಂಘ ಅಧ್ಯಕ್ಷ ವಸಂತ ಗೌಡ ಮರಕಡ, ಒಕ್ಕಲಿಗ ಗೌಡರ ಯುವ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಜಿಲ್ಲಾ ಒಕ್ಕಲಿಗ ಗೌಡರ ಸಂಘ ನಿರ್ದೇಶಕ ವಿಜಯ ಗೌಡ ವೇಣೂರು, ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಕಾರ್ಯಾಧ್ಯಕ್ಷ ಶ್ರೀನಿವಾಸ ಗೌಡ, ಜಿಲ್ಲಾ ಒಕ್ಕಲಿಗ ಗೌಡರ ಸಂಘ ಜೊತೆ ಕಾರ್ಯದರ್ಶಿ ದಾಮೋದರ ಗೌಡ ಸುರುಳಿ , ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಕಾರ್ಯಾಧ್ಯಕ್ಷ ಜಯಂತ ಗೌಡ ಸಾಯಿಕೃಪಾ ಗುರಿಪಳ್ಳ , ಬೆಳ್ತಂಗಡಿ ತಾಲೂಕು ವಕೀಲ ಸಂಘ ಕಾರ್ಯದರ್ಶಿ ನವೀನ್ ಬಿ.ಕೆ., ಜಿಲ್ಲಾ ಒಕ್ಕಲಿಗ ಗೌಡರ ಟ್ರಸ್ಟ್ ಜೊತೆ ಕೋಶಾಧಿಕಾರಿ ಸೂರಜ್ ವಳಂಬ್ರ, ಒಕ್ಕಲಿಗ ಗೌಡರ ಸಂಘ ಕಾರ್ಯದರ್ಶಿಗಳಾದ ಬಾಲಕೃಷ್ಣ ಗೌಡ ಕಲ್ಲಾಜೆ , ಭರತ್ ಗೌಡ ಹಾನಿಬೆಟ್ಟು , ಮಂಗಳೂರು ಬ್ಲಡ್ ಸೆಂಟರ್, ಕೆಎಂಸಿ, ವೈದ್ಯಕೀಯ ಅಧಿಕಾರಿ ಡಾ| ಸಿಂಚನ, ಒಕ್ಕಲಿಗ ಗೌಡರ ಮಹಿಳಾ ವೇದಿಕೆ ಅಧ್ಯಕ್ಷ ಶ್ರೀಮತಿ ಅಪರ್ಣ ಶಿವಕಾಂತ ಗೌಡ, ಒಕ್ಕಲಿಗ ಗೌಡರ ಮಹಿಳಾ ಯುವ ವೇದಿಕೆ ಅಧ್ಯಕ್ಷೆ ಶ್ರೀಮತಿ ಅನುಪಮ ಸತೀಶ್ ಮಾಳಿಗೆಮನೆ ಉಪಸ್ಥಿತರಿದ್ದರು.

ಶಾಸಕ ಹರೀಶ್ ಪೂಂಜ ಬೃಹತ್ ರಕ್ತದಾನ ಶಿಬಿರಕ್ಕೆ ಬೇಟಿ ನೀಡಿದರು.

ಒಕ್ಕಲಿಗ ಗೌಡರ ಯುವ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಸ್ವಾಗತಿಸಿ, ರಾಘವೇಂದ್ರ ಗೌಡ ವಂದಿಸಿ, ನಿತಿನ್ ಸುರಳಿ ವಂದಿಸಿದರು.

Related posts

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya

ಪರಪ್ಪು ಮಸೀದಿ ಮಾಜಿ ಅಧ್ಯಕ್ಷ, ಉದ್ಯಮಿ ಜೆ.ಎಸ್. ಯಾಕುಬ್ ಬಟ್ಟೆಮಾರು ಹೃದಯಾಘಾತದಿಂದ ನಿಧನ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!