ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ:ಪೃಥ್ವಿ ಜ್ಯುವೆಲ್ಸ್ ನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ,ಪೋಟೋ ವಿಜೇತರಿಗೆ ಪ್ರಶಸ್ತಿ

ಬೆಳ್ತಂಗಡಿ: ಸಾಧಕ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರೋತ್ಸಾಹಿಸಿ ಅವರ ಮನೋ ಬಲವನ್ನು ಗಟ್ಟಿಗೊಳಿಸುವ ಕೆಲಸವನ್ನು ಪೃಥ್ವಿ ಜ್ಯುವೆಲ್ಸ್ ಮಾಡುತ್ತಿದೆ. ಕಳೆದ ಹಲವು ವರ್ಷಗಳಿಂದ ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಉತ್ತಮ ವೇದಿಕೆಯನ್ನು ಕಲ್ಪಿಸುವ ಮೂಲಕ ಸಮಾಜಕ್ಕೆ ಈ ಸಂಸ್ಥೆ ಸ್ಪೂರ್ತಿಯಾಗಿದೆ ರಂದು ವೇಣೂರು ಪ್ರೌಢ ಶಾಲಾ ವಿಜ್ಞಾನ ಶಿಕ್ಷಕಿ ಸಂಧ್ಯಾ ಸುಕುಮಾರ್ ಜೈನ್ ಹೇಳಿದರು.

ಅವರು ಪೃಥ್ವಿ ಜ್ಯುವೆಲ್ಸ್ ನಲ್ಲಿ ನಡೆದ ಎಸ್.ಎಸ್.ಎಲ್.ಸಿಯಲ್ಲಿ ಸಾಧನೆಗೈದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಸಮಾರಂಭದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ‌ ಪ್ರಜೆಯಾಗಿ ಬಾಳಬೇಕು ಎಂದರು.

ಸುದ್ದಿ ಉದಯ ವಾರಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ ಕೋಟ್ಯಾನ್ ಮಾತನಾಡಿ ಕಳೆದೆಳು ವರ್ಷಗಳಿಂದ ಪೃಥ್ವಿ ಜುವೆಲ್ಸ್ ಸಂಸ್ಥೆಯು ವಿಶಿಷ್ಟ ಕಾರ್ಯಕ್ರಮಗಳ ಆಯೋಜನೆ ಮೂಲಕ ಪ್ರತಿ ಮನೆ ಮನೆಗೆ ತಲುಪಿದೆ.ಭಾರತೀಯ ವಿಚಾರಧಾರೆ ಮತ್ತು ಭಾವೈಕ್ಯತೆಯ ಶಿಕ್ಷಣ ಇಂದಿನ ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್ಸಿಯಲ್ಲಿ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಫಾದರ್ ಡೇ ಆಯೋಜಿಸಿದ ಪೋಟೋ ಸ್ಪರ್ದೇಯಲ್ಲಿ ವಿಜೇತರಾದ ಕವಿತೇಶ್ ಇವರನ್ನು ಗೌರವಿಸಲಾಯಿತು.

ಸಂಸ್ಥೆಯ ಮ್ಯಾನೇಜರ್ ಅಶೋಕ್ ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಸಿಬ್ಬಂದಿಗಳು ಸಹಕರಿಸಿದರು.ಮಧುಮಿತ್ರ ಬಂಟ್ವಾಳ ನಿರೂಪಿಸಿ ವಂದಿಸಿದರು.


ಸನ್ಮಾನ: ಕಾರ್ಯಕ್ರಮದಲ್ಲಿ ಎಸ್.ಎಸ್‌‌.ಎಲ್.ಸಿ ಸಾಧಕರಾದ ಶರುಣ್ ಡಿಸೋಜ,ತಾನ್ವಿ ಭಟ್ ಎಂ,ಮನಶ್ರೀ,ಸುಪ್ರಿಯ ಎಸ್,ಅರ್ಮಾನ್ ರಿಯಾಜ್,ಅನ್ನಿತಾ ಜೋಸೆಫ್ ಇವರನ್ನು ಸನ್ಮಾನಿಸಲಾಯಿತು.ಮಕ್ಕಳ ಪೋಷಕರು ಉಪಸ್ಥಿತರಿದ್ದರು. ‌

Related posts

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya

ಧರ್ಮಸ್ಥಳದಲ್ಲಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರ 135ನೇ ಜನ್ಮದಿನದ ಸಂಭ್ರಮಾಚರಣೆ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ

Suddi Udaya

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಆದೇಶ

Suddi Udaya
error: Content is protected !!