23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘ, ಎನ್ ಎಸ್ ಎಸ್, ರೋವರ್ಸ್ ಮತ್ತು ರೇಂಜರ್ಸ್ ಹಾಗೂ ಇತರ ಸಂಘಗಳ ಉದ್ಘಾಟನೆಯು ಜೂ.27 ರಂದು ನಡೆಯಿತು.


ಉದ್ಘಾಟಕರಾಗಿ ಆಗಮಿಸಿದ ಸರಕಾರಿ ಪ್ರೌಢ ಶಾಲೆ ಕಕ್ಕಿಂಜೆಯ ಮುಖ್ಯೋಪಾಧ್ಯಾಯರಾದ ಶಂಭು ಶಂಕರ ಅವರು, ‘ದೇಶದ ಬೆಳವಣಿಗೆಗೆ ವಿದ್ಯಾವಂತ ಯುವಕರ ಪಾಲ್ಗೊಳ್ಳುವಿಕೆ ನಿರ್ಣಾಯಕವಾದುದು, ಸೇವಾಮನೋಭಾವನೆ, ನಾಯಕತ್ವ ಹಾಗೂ ಜೀವನ ಕೌಶಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ಬೆಳೆಸಿಕೊಳ್ಳಬೇಕು’ ಎಂದರು. ವಿದ್ಯಾರ್ಥಿ ನಾಯಕರಿಗೆ ಕಾಲೇಜಿನ ಪ್ರಾಂಶುಪಾಲೆ ಗೀತಾ ಪ್ರಮಾಣವಚನ ಬೋಧಿಸಿ, ಶುಭ ಹಾರೈಸಿದರು.

ವಿದ್ಯಾರ್ಥಿ ಸಂಘದ ಸಲಹೆಗಾರರಾದ ಪುರುಷೋತ್ತಮ ಶೆಟ್ಟಿ ಪ್ರಸ್ತಾವಿಸಿ, ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ವಹಿಸಿದ್ದರು. ವಿದ್ಯಾರ್ಥಿ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿ ಪ್ರತಿನಿಧಿಗಳ ಪರವಾಗಿ ಮೋಕ್ಷಿತಾ ತಮ್ಮ ಮುಂದಿನ ಯೋಜನೆಗಳ ಬಗ್ಗೆ ತಿಳಿಸಿದರು. ಉಪನ್ಯಾಸಕಿ ನಮಿತಾ ಕೆ. ಆರ್ ನಿರೂಪಿಸಿದರು. ಉಪನ್ಯಾಸಕ ಸುಭಾಷ್ ಚಂದ್ರ ಜೈನ್ ಪುಷ್ಪ ನೀಡಿ ಗೌರವಿಸಿದರು. ಉಪನ್ಯಾಸಕ ಪದ್ಮನಾಭ ಬಿ.ಕೆ. ವಂದಿಸಿದರು. ಎಲ್ಲಾ ಉಪನ್ಯಾಸಕರು ಸಹಕರಿಸಿದರು.

Related posts

ಮೂಡುಬಿದಿರೆ ತಾಲೂಕು ಮಟ್ಟದ ವಿಜ್ಞಾನ ಸ್ಪರ್ಧೆಗಳು -2025ಭಾರತದ ಯುವಜನತೆ ವೈಜ್ಞಾನಿಕ ಕ್ಷೇತ್ರಕ್ಕೆ ಕೊಡುಗೆಯನ್ನು ನೀಡುವ ಶಕ್ತಿಯಾಗಬೇಕು- ಶ್ರೀಮತಿ ರಶ್ಮಿತಾ ಜೈನ್

Suddi Udaya

ಉಜಿರೆ ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿ ಬೆಂಬಲ

Suddi Udaya
error: Content is protected !!