25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ 175 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ವೆನ್ಲಾಕ್ ರಕ್ಷಾ ಸಮಿತಿ

ಧರ್ಮಸ್ಥಳ: ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಗೆ 175 ನೇ ವರ್ಷ ತುಂಬಿದ ಪ್ರಯುಕ್ತ ಸಂಭ್ರಮಾಚರಣೆಯು ಬರುವ ಸೆಪ್ಟೆಂಬರ್ 14 ರಂದು ವೆನ್ಲಾಕ್, ಲೇಡಿಗೋಷನ್, ಕೆ. ಎಮ್.ಸಿ. ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷ ಯು.ಟಿ ಖಾದರ್, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಸೇರಿದಂತೆ ಹಲವಾರು ಸಚಿವರು, ಸಂಸದರು, ರಾಜ್ಯಸಭಾ ಸದಸ್ಯರು, ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ನಿಗಮ ಮಂಡಳಿಯ ಅಧ್ಯಕ್ಷರುಗಳು, ಜಿಲ್ಲೆಯ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಮುಂದಿನ ಭಾಗವಾಗಿ ಜೂ. 26ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಅಧೀಕ್ಷಕರಾದ ಡಾ.ಶಿವಪ್ರಕಾಶ್ ಡಿ.ಎಸ್. ನೇತೃತ್ವದಲ್ಲಿ ಬೇಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ಪಲಿಯೇಟಿವ್ ಮೆಡಿಕಲ್ ಆಫೀಸರ್ ಡಾ. ಅನ್ನಯ್ಯ ಕುಲಾಲ್, ಪಿಸಿಷಿಯನ್ ಡಾ.ವಿಜಯ ಕುಮಾರ್, ರಕ್ಷಾ ಸಮಿತಿಯ ಪದ್ಮನಾಭ ಅಮೀನ್, ಅಬ್ದುಲ್ ಕರೀಮ್ ಗೇರುಕಟ್ಟೆ, ಶಶಿದರ್ ಬಜಾಲ್, ಅಬ್ದುಲ್ ಸಲೀಮ್, ಶ್ರೀಮತಿ ಪ್ರಮೀಳಾ, ದಾಮೋದರ್ ಪುತ್ತೂರು, ಜಯರಾಮ ಬೆಳ್ತಂಗಡಿ, ವಕ್ಫ್ ಸಲಹಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಸಹಾಯಕ ಆಡಳಿತಾಧಿಕಾರಿಗಳಾದ ಶ್ರೀಮತಿ ವಿದ್ಯಾ ಬಿ,ಕಛೇರಿ ಅಧೀಕ್ಷಕರಾದ ಅಶೋಕ್ ರಾಜನಾಲ್, ದ್ವಿತೀಯ ದರ್ಜೆ ಸಹಾಯಕ ಎ.ಕ್ಲೆರೆನ್ಸ್ ರಾಜ್,ಸಿಬ್ಬಂದಿ ಸಿದ್ದಪ್ಪ ಹಾಗೂ ಉಸ್ಮಾನ್ ಕೆ.ಪಿ.ಕಾಜೂರು ಹಾಜರಿದ್ದರು.

Related posts

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya

ಅಂಡಿಂಜೆ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಬೆಳ್ತಂಗಡಿ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಕೊಕ್ಕಡ ಗ್ರಾಮ ಸಮಿತಿ ಸಭೆ, ನೂತನ ಸಮಿತಿ ರಚನೆ

Suddi Udaya

ದೇವನಗುಲ್‌ ಚಾರ್ಮಾಡಿ ಅಡ್ಡ ರಸ್ತೆಗೆ ಗೇಟ್‌ – ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

Suddi Udaya
error: Content is protected !!