25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಭಾರತೀಯ ಜೈನ್ ಮಿಲನ್ ವತಿಯಿಂದ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್‌ರವರಿಗೆ ಅಭಿನಂದನೆ

ವೇಣೂರು: ಇಲ್ಲಿಯ ಭಾರತೀಯ ಜೈನ್ ಮಿಲನ್ ವೇಣೂರು ಘಟದ ಸಭೆಯು ವೇಣೂರು ಯಾತ್ರಿ ನಿವಾಸದಲ್ಲಿ ಜರುಗಿತು.

ಭಾರತೀಯ ಜೈನ್ ಮಿಲನ್ ಅಧ್ಯಕ್ಷ ಸುಕುಮಾರ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಕ್ಸೆಲ್ ಪ.ಪೂ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಭಾರತೀಯ ಜೈನ್ ಮಿಲನ್ ವಲಯ ೮ರ ನಿರ್ದೇಶಕ ಪ್ರಮೋದ್ ಕುಮಾರ್ ಬಿ., ಜೈನ್ ಮಿಲನ್ ಕಾರ್ಯದರ್ಶಿ ಬಿ. ನಿರ್ಮಲ್ ಕುಮಾರ್ ಬೊಲ್ಜಾಲ್ ಉಪಸ್ಥಿತರಿದ್ದರು. ಈ ಸಂದರ್ಭ ಶಿಕ್ಷಣ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿ ಅರ್ಹವಾಗಿ ಪ್ರತಿಷ್ಠಿತ ವಿಜಯರತ್ನ ಪ್ರಶÀಸ್ತಿಯಿಂದ ಪುರಸ್ಕೃತಗೊಂಡಿರುವ ಗುರುವಾಯನಕೆರೆ ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌ರವರನ್ನು ಅಭಿನಂದಿಸಿ ಗೌರವಿಸಲಾಯಿತು.


ಈ ಸಂದರ್ಭ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ೬೨೦ ಅಂಕಗಳನ್ನು ಪಡೆದು ರಾಜ್ಯಕ್ಕೆ ೬ನೇ ಸ್ಥಾನ ಪಡೆದ ಸರ್ವಾರ್ಥ್ ಎಸ್. ಜೈನ್ ಸೇರಿದಂತೆ ೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.೯೦ಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜರುಗಿತು.
ಈ ಸಂದರ್ಭ ಅರಿಹಂತ ವಿಷನ್ ಇನ್ ಟ್ರಾಕ್ಸ್ನ ವಿ.ಎಸ್. ಜಯರಾಜ್, ನಮನ ಕ್ಲಿನಿಕ್‌ನ ವೈದ್ಯರಾದ ಡಾ| ಶಾಂತಿಪ್ರಸಾದ್, ಪಾರ್ಶ್ವನಾಥ್ ಪ್ರಿಂರ‍್ಸ್ನ ಸುದತ್ ಜೈನ್, ಅರುಣ್ ಕುಮಾರ್ ಐದಲ್ಕೆ, ಬಿ.ವಿ. ಸುನೀಲ್ ಕುಮಾರ್ ಮುದ್ದಾಡಿ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.


Related posts

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya
error: Content is protected !!