
ಶಿಶಿಲ : ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಶಿಶಿಲೇಶ್ವರ ದೇವಸ್ಥಾನದ ತಡೆಗೋಡೆ ಕುಸಿತಗೊಂಡು, ದೇವಾಲಯದ ಹೊರಾಂಗಣ ಮತ್ತು ಒಳಾಂಗಣದಲ್ಲೂ ನೀರು ನುಗ್ಗಿ ಸಂಪೂರ್ಣ ಕೆಸರುಮಯವಾಗಿದ್ದು, ಭಕ್ತಾದಿಗಳಿಗೆ ದೇವರ ದರ್ಶನ ಪಡೆಯಲು ಅನಾನುಕೂಲ ಪರಿಸ್ಥಿತಿ ನಿರ್ಮಾಣವಾಗಿತ್ತು ಇದನ್ನು ಮನಗಂಡ ಊರಿನ ಭಕ್ತಾದಿಗಳು ದೇವಸ್ಥಾನದ ಸುತ್ತಲೂ ಇಂದು (ಜೂ.27 ) ಶ್ರಮದಾನ ಮೂಲಕ ಸ್ವಚ್ಛಗೊಳಿಸಿದರು.






