September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ನೀರು: ಬಂಗಾಡಿ ಸಿಎ ಬ್ಯಾಂಕ್ ಹಾಗೂ ಜೈನ ಬಸದಿ ವತಿಯಿಂದ ಪೈಪ್ ಅಳವಡಿಕೆ: “ಸುದ್ದಿ ಉದಯ ಜನಧ್ವನಿ Effect”

ಬಂಗಾಡಿ: ಬಂಗಾಡಿ ಜೈನ ಬಸದಿ ಎದುರು ಜೂ.25 ರಂದು ಅತಿಯಾದ ಮಳೆಯಿಂದಾಗಿ ಚರಂಡಿ ನಿರ್ವಹಣೆ ಇಲ್ಲದೆ ರಸ್ತೆಯಲ್ಲೇ ಮಳೆಯ ನೀರು ಹರಿದಿದೆ ಎಂದು ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿ ಪ್ರಕಟಗೊಂಡಿತು. ಈ ಬಗ್ಗೆ ಎಚ್ಚೆತ್ತ ಬಂಗಾಡಿ ವ್ಯವಸಾಯಕ ಸಹಕಾರಿ ಸಂಘ ಹಾಗೂ ಬಂಗಾಡಿ ಜೈನ ಬಸದಿ ಹಾಗೂ ಸ್ಥಳೀಯ ಮನೆಯವರ ಸಹಕಾರದಿಂದ ಪೈಪ್ ಅಳವಡಿಸಿ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಿದರು.

ಚರಂಡಿ ಅತೀ ಸಣ್ಣದು ಪ್ರತೀ ವರ್ಷ ಇಲ್ಲಿ ಮಳೆ ಬಂದರೆ ನೀರೆಲ್ಲಾ ಚರಂಡಿ ಇಲ್ಲದೆ ಮಾರ್ಗದಲ್ಲೇ ಹರಿಯುತ್ತದೆ. ನೀರು ತುಂಬಿ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರಿಗೆ , ಶಾಲಾ ಮಕ್ಕಳಿಗೆ ಕಷ್ಟವಾಗುತ್ತಿದೆ. ಪ್ರತೀ ವರ್ಷ ಮಳೆ ಬಂದರೆ ಇದೇ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದು ವರದಿ ಪ್ರಕಟಿಸಿದ ಕೂಡಲೇ ಸ್ಪಂದಿಸಿ ದುರಸ್ತಿ ವ್ಯವಸ್ಥೆಯನ್ನು ಮಾಡಿದರು.

Related posts

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ತೆಕ್ಕಾರುನಲ್ಲಿ ಗುಡ್ಡ ಜರಿದು ಅಪಾರ ಹಾನಿ

Suddi Udaya

ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya
error: Content is protected !!